ಸಂಸದ ಗಣೇಶಮೂರ್ತಿ 
ದೇಶ

ತಮಿಳುನಾಡು: ಈರೋಡ್ ಸಂಸದ ಗಣೇಶಮೂರ್ತಿ ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ

ತಮಿಳುನಾಡಿನ ಈರೋಡ್ ಸಂಸದ ಎ. ಗಣೇಶಮೂರ್ತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚೆನ್ನೈ: ತಮಿಳುನಾಡಿನ ಈರೋಡ್ ಸಂಸದ ಎ. ಗಣೇಶಮೂರ್ತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅವರ ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅವರು ಕೀಟನಾಶಕ ಸೇವಿಸಿದ ಕಾರಣ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದಿಂದ ಸ್ಪರ್ಧೆ ನಡೆಸಿದ್ದ ಗಣೇಶಮೂರ್ತಿ ಅವರು ಜಯ ಗಳಿಸಿದ್ದರು. ಸೋಮವಾರ ಮುಂಜಾನೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಅವರು ಕೀಟನಾಶಕ ಸೇವಿಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಎಂಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಇಸಿಎಂಒ ಚಿಕಿತ್ಸೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಣ ಬಡಿದಾಟ: ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ- Video

Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿ. 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆ

ಮದುವೆಯಾದ ಸಂತಸದಲ್ಲಿದ್ದ ಮದುಮಗ ಹೃದಯಾಘಾತದಿಂದ ಸಾವು!

ಮಧ್ಯಾಹ್ನದ ಬಿಸಿಯೂಟ: ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಹಾಲು ವಿತರಿಸಲು ಆದೇಶ

50 ದಿನಗಳ ನಿರಂತರ ಶುಕ್ಲ ಯಜುರ್ವೇದದ ದಂಡಕ್ರಮ ಪಾರಾಯಣ: ಕಾಶಿಯ ಯುವ ವೇದ ವಿದ್ವಾಂಸನ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

SCROLL FOR NEXT