ಕೆ. ಕವಿತಾ
ಕೆ. ಕವಿತಾ 
ದೇಶ

ಬಿಆರ್‌ಎಸ್‌ ನಾಯಕಿ ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ

Nagaraja AB

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ನವದೆಹಲಿಯ ನ್ಯಾಯಾಲಯ ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಸ್ಟಡಿ ವಿಚಾರಣೆ ವಿಸ್ತರಿಸಲು ಜಾರಿ ನಿರ್ದೇಶನಾಲಯ (ಇಡಿ) ಕೋರದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 16 ರಂದು ಏಳು ದಿನಗಳ ಇಡಿ ಕಸ್ಟಡಿಗೆ ಕವಿತಾ ಅವರನ್ನು ಒಪ್ಪಿಸಲಾಗಿತ್ತು. ಕಳೆದ ಶನಿವಾರ ಅದನ್ನು ಮೂರು ದಿನಗಳವರೆಗೆ ವಿಸ್ತರಿಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಅಪ್ರಾಪ್ತ ಮಗನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡುವಂತೆ ಕವಿತಾ ಪರ ವಕೀಲ ನಿತೇಶ್ ರಾಣಾ ಕೋರಿದರು. ಮಧ್ಯಂತರ ಜಾಮೀನನ್ನು ಪರಿಗಣಿಸಬೇಕಿದ್ದರೂ ಉತ್ತರ ಸಲ್ಲಿಸಲು ಅವಕಾಶ ನೀಡಬೇಕು ಎಂದು ಇಡಿ ಪರ ವಕೀಲರು ಹೇಳಿದರು. ಮಧ್ಯಂತರ ಮತ್ತು ನಿಯಮಿತ ಜಾಮೀನು ಎರಡಕ್ಕೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕಠಿಣ ನಿಬಂಧನೆಗಳಿವೆ ಎಂದು ಇಡಿ ಹೇಳಿತು.

ದೆಹಲಿ ಅಬಕಾರಿ ನೀತಿಯಲ್ಲಿ ದೊಡ್ಡ ಪಾಲಿಗಾಗಿ ಎಎಪಿಗೆ 100 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಯಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು 'ಸೌತ್ ಗ್ರೂಪ್' ನ ಪ್ರಮುಖ ಸದಸ್ಯೆಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ. 14 ವರ್ಷದ ಕವಿತಾ ಅವರನ್ನು ಮಾರ್ಚ್ 15 ರಂದು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿತು.

SCROLL FOR NEXT