ಕಂಗನಾ ರಣಾವತ್ 
ದೇಶ

'ಮಂಡಿ'ಯಲ್ಲಿ ಏನಾಗುತ್ತಿದೆ? ಕಾಂಗ್ರೆಸ್ ನಾಯಕಿಯ ಅವಹೇಳನಕ್ಕೆ ಕಂಗನಾ ತಿರುಗೇಟು!

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುಪ್ರಿಯಾ ಶ್ರಿನೇಟ್ ಕೂಡಾ ಇನ್​​ಸ್ಟಾಗ್ರಾಮ್​​ನಲ್ಲಿ ಕಂಗನಾ ರಣಾವತ್ ಅವರ ಹಾಟ್ ಫೋಟೊವೊಂದನ್ನು ಪೋಸ್ಟ್ ಮಾಡಿ “ಕ್ಯಾ ಭಾವ್ ಚಲ್ ರಹಾ ಹೈ ಮಂಡಿ ಮೆ ಕೋಯಿ ಬತಾಯೇಗಾ?

ನವದೆಹಲಿ: ಕಂಗನಾ ರಣಾವತ್ ಬಗ್ಗೆ ದೇಶದಲ್ಲಿ ಪರ-ವಿರೋಧ ಅಭಿಪ್ರಾಯಗಳು ಇರುವುದು ಸಹಜ. ಸಿನಿಮಾಗಳಲ್ಲಿ ಅದ್ಭುತ ಅಭಿನಯದಿಂದ ಗಮನಸೆಳೆದಿರುವ ಕಂಗನಾ ರಣಾವತ್ ಅವರು ತಮ್ಮ ಬೋಲ್ಡ್ ಹೇಳಿಕೆಗಳಿಂದ ಸಾಕಷ್ಟು ವಿವಾದಗಳನ್ನು ಸೃಷ್ಟಿ ಮಾಡಿಕೊಂಡಿದ್ದಾರೆ. ನರೇಂದ್ರ ಮೋದಿ, ಬಿಜೆಪಿ ಪಕ್ಷವನ್ನು ಹೊಗಳುತ್ತ ಬಂದಿದ್ದ ಕಂಗನಾಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿದೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ನಟಿ ಕಂಗನಾ ರಣಾವತ್ ಮೇಲೆ ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುಪ್ರಿಯಾ ಶ್ರಿನೇಟ್ ಕೂಡಾ ಇನ್​​ಸ್ಟಾಗ್ರಾಮ್​​ನಲ್ಲಿ ಕಂಗನಾ ರಣಾವತ್ ಅವರ ಹಾಟ್ ಫೋಟೊವೊಂದನ್ನು ಪೋಸ್ಟ್ ಮಾಡಿ “ಕ್ಯಾ ಭಾವ್ ಚಲ್ ರಹಾ ಹೈ ಮಂಡಿ ಮೆ ಕೋಯಿ ಬತಾಯೇಗಾ? ಎಂದು ಬರೆದಿದ್ದು, ಜನಾಕ್ರೋಶಕ್ಕೆ ಕಾರಣವಾಗಿತ್ತು, ಅದಾದ ನಂತರ ಆ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಜನಾಕ್ರೋಶ ಕಂಡುಬರುತ್ತಿದ್ದಂತೆ ಶ್ರಿನೇಟ್ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಿಂದ ಪೋಸ್ಟ್ ಅಳಿಸಿದ್ದು ತನ್ನ ಮೆಟಾ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ತನ್ನ ಅಣಕ ಖಾತೆ ಮಾಡಿದ ಕಿಡಿಗೇಡಿತನ ಎಂದಿದ್ದಾರೆ.

ತನ್ನ ಚಿತ್ರದೊಂದಿಗೆ ಅವಹೇಳನಾಕಾರಿ ಬರಹ ಪೋಸ್ಟ್ ಮಾಡಿದ ಸುಪ್ರಿಯಾಗೆ ಕಂಗನಾ ತಿರುಗೇಟು ನೀಡಿದ್ದಾರೆ ,ಡಿಯರ್ ಸುಪ್ರಿಯಾ ಜೀ, ಕಳೆದ 20 ವರ್ಷಗಳಿಂದ ನನ್ನ ಕರಿಯರ್‌ನಲ್ಲಿ ಕಲಾವಿದೆಯಾಗಿ ಎಲ್ಲ ರೀತಿಯ ಮಹಿಳೆಯ ಪಾತ್ರ ಮಾಡಿದ್ದೇನೆ. ಕ್ವೀನ್​​ನಲ್ಲಿನ ಮುಗ್ದ ಹುಡುಗಿಯಿಂದ ಹಿಡಿದು ಢಾಕಡ್‌ನಲ್ಲಿ ಮೋಹಕ ಗೂಢಚಾರಿಕೆಯವರೆಗೆ, ಮಣಿಕರ್ಣಿಕಾದಲ್ಲಿ ದೇವತೆಯಿಂದ ಚಂದ್ರಮುಖಿಯಲ್ಲಿನ ಪಿಶಾಚಿ ವರೆಗೆ, ರಜ್ಜೋದಲ್ಲಿ ವೇಶ್ಯೆಯಿಂದ ತಲೈವಿಯ ಕ್ರಾಂತಿಕಾರಿ ನಾಯಕಿವರೆಗೆ.

ನಾವು ಪೂರ್ವಾಗ್ರಹಗಳ ಸಂಕೋಲೆಯಿಂದ ನಮ್ಮ ಹೆಣ್ಣುಮಕ್ಕಳನ್ನು ಮುಕ್ತಗೊಳಿಸಬೇಕು, ಅವರ ದೇಹದ ಅಂಗಗಳ ಬಗ್ಗೆ ಕುತೂಹಲ ಬಿಡಬೇಕು. ಎಲ್ಲಕ್ಕಿಂತ ಹೆಚ್ಚಾಗಿ ನಾವು ಲೈಂಗಿಕ ಕೆಲಸಗಾರರನ್ನು ಜೀವನ ಅಥವಾ ಸಂದರ್ಭಗಳಿಗೆ ಸವಾಲು ಹಾಕುವುದನ್ನು ಕೆಲವು ರೀತಿಯ ನಿಂದನೆ ಅಥವಾ ನಿಂದೆಯಾಗಿ ಬಳಸುವುದನ್ನು ತಡೆಯಬೇಕು. ಪ್ರತಿಯೊಬ್ಬ ಮಹಿಳೆಯೂ ಅವಳ ಘನತೆಗೆ ಅರ್ಹಳು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT