ರಾಹುಲ್ ಗಾಂಧಿ - ಸಂಜಯ್ ರಾವತ್ 
ದೇಶ

ಲೋಕಸಭೆ ಚುನಾವಣೆ: ಶಿವಸೇನೆ(UBT) 16 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಅನಂತ್ ಗೀತೆ, ಸಾವಂತ್‌ಗೆ ಟಿಕೆಟ್

ಮುಂಬರುವ ಲೋಕಸಭೆ ಚುನಾವಣೆಗೆ ಶಿವಸೇನೆ(ಯುಬಿಟಿ) ತನ್ನ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಶಿವಸೇನೆ(ಯುಬಿಟಿ) ತನ್ನ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಮಾಜಿ ಕೇಂದ್ರ ಸಚಿವರಾದ ಅನಂತ್ ಗೀತೆ ಮತ್ತು ಅರವಿಂದ್ ಸಾವಂತ್ ಅವರನ್ನು ಕ್ರಮವಾಗಿ ರಾಯಗಡ ಮತ್ತು ದಕ್ಷಿಣ ಮುಂಬೈ ಕ್ಷೇತ್ರಗಳಿಂದ ಕಣಕ್ಕಿಳಿಸಲಾಗಿದೆ.

2022 ರಲ್ಲಿ ಶಿವಸೇನೆ ವಿಭಜನೆಯಾದ ನಂತರ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಉಳಿದುಕೊಂಡಿದ್ದ ಎಲ್ಲಾ ಐದು ಹಾಲಿ ಸಂಸದರಿಗೆ ಪಕ್ಷ ಮತ್ತೆ ಟಿಕೆಟ್ ನೀಡಿದೆ.

ಹಾಲಿ ಸಂಸದರಾದ ಅರವಿಂದ್ ಸಾವಂತ್(ದಕ್ಷಿಣ ಮುಂಬೈ), ರಾಜನ್ ವಿಚಾರೆ(ಥಾಣೆ), ವಿನಾಯಕ್ ರಾವತ್(ರತ್ನಗಿರಿ-ಸಿಂಧುದುರ್ಗ), ಓಂರಾಜೆ ನಿಂಬಾಳ್ಕರ್(ಧಾರಶಿವ್) ಮತ್ತು ಸಂಜಯ್ ಜಾಧವ್(ಪರ್ಭಾನಿ) ಅವರು ಮತ್ತೆ ಟಿಕೆಟ್ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಅವಿಭಜಿತ ಶಿವಸೇನೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತೊರೆದ ನಂತರ ಸಾವಂತ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ವಿಚಾರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ನೆಲವಾದ ಥಾಣೆಯನ್ನು ಪ್ರತಿನಿಧಿಸುತ್ತಿದ್ದಾರೆ. ಶಿಂಧೆ ಬಂಡಾಯದಿಂದ 1966 ರಲ್ಲಿ ಬಾಳ್ ಠಾಕ್ರೆ ಸ್ಥಾಪಿಸಿದ ಶಿವಸೇನೆ ಇಬ್ಭಾಗವಾಯಿತು.

ಶಿವಸೇನೆ(ಯುಬಿಟಿ), ಛತ್ರಪತಿ ಸಂಭಾಜಿನಗರದಿಂದ ಪಕ್ಷದ ಹಿರಿಯ ನಾಯಕ ಚಂದ್ರಕಾಂತ್ ಖೈರೆ ಅವರನ್ನು ಕಣಕ್ಕಿಳಿಸಿದೆ. ಖೈರೆ ಅವರು 2019 ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಅಭ್ಯರ್ಥಿ ಇಮ್ತಿಯಾಜ್ ಜಲೀಲ್ ವಿರುದ್ಧ ಸೋತಿದ್ದರು.

ಮುಂಬೈ ಈಶಾನ್ಯದಿಂದ, ಮಾಜಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಶಾಸಕ ಮತ್ತು ನಂತರ ಶಿವಸೇನೆಗೆ ಸೇರ್ಪಡೆಗೊಂಡ ಸಂಸದ ಸಂಜಯ್ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT