ಸುನಿತಾ ಕೇಜ್ರಿವಾಲ್ 
ದೇಶ

ನಾಳೆ ನನ್ನ ಪತಿ ಕೋರ್ಟ್ ನಲ್ಲಿ ಸತ್ಯ ಬಹಿರಂಗಪಡಿಸಲಿದ್ದಾರೆ: ಸುನಿತಾ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸಿದ ಹಲವು ದಾಳಿಗಳಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸಿದ ಹಲವು ದಾಳಿಗಳಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ ಎಂದು ಒತ್ತಿ ಹೇಳಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಅವರು, ನನ್ನ ಪತಿ ಮಾರ್ಚ್ 28 ರಂದು ನ್ಯಾಯಾಲಯದಲ್ಲಿ "ದೊಡ್ಡ ಸತ್ಯ ಬಹಿರಂಗಪಡಿಸುತ್ತಾರೆ" ಎಂದು ಬುಧವಾರ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರನ್ನು ಮಾರ್ಚ್ 21 ರಂದು ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಬಂಧಿಸಿತು ಮತ್ತು ನಂತರ ಮಾರ್ಚ್ 28 ರವರೆಗೆ ಅವರನ್ನು ಇಡಿ ಕಸ್ಟಡಿಗೆ ನೀಡಲಾಯಿತು.

ಅರವಿಂದ್ ಕೇಜ್ರಿವಾಲ್ ಅವರು ನಾಳೆ ಕೋರ್ಟ್ ಸತ್ಯವನ್ನು ಬಹಿರಂಗಪಡಿಸುತ್ತಾರೆ ಮತ್ತು ಅದಕ್ಕೆ ಸಾಕ್ಷ್ಯವನ್ನು ಸಹ ನೀಡುತ್ತಾರೆ ಎಂದು ಸುನಿತಾ ಕೇಜ್ರಿವಾಲ್ ಅವರು ಹೇಳಿದ್ದಾರೆ.

"ಎರಡು ವರ್ಷಗಳ ತನಿಖೆಯ ಹೊರತಾಗಿಯೂ, ಇಡಿ ಒಂದೇ ಒಂದು ಪೈಸೆ ಸಾಕ್ಷ್ಯವನ್ನು ಕಂಡುಹಿಡಿಯಲು ಸಾಧ್ಯವಾಗಲಿಲ್ಲ. ಅವರು ಮುಖ್ಯಮಂತ್ರಿ ನಿವಾಸದ ಮೇಲೆ ದಾಳಿ ಮಾಡಿದರು. ಆದರೆ ಅವರಿಗೆ ಸಿಕ್ಕಿದ್ದು ಕೇವಲ 73,000 ರೂ." ಎಂದು ಸುನಿತಾ ತಿಳಿಸಿದ್ದಾರೆ.

"ನನ್ನ ಪತಿ ಕಸ್ಟಡಿಯಲ್ಲಿದ್ದಾಗ ಜಲ ಸಚಿವೆ ಅತಿಶಿಗೆ ನಿರ್ದೇಶನಗಳನ್ನು ನೀಡಿದರು. ಕೇಂದ್ರ ಸರ್ಕಾರ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ. ಅವರು ದೆಹಲಿಯನ್ನು ಹಾಳುಮಾಡಲು ಬಯಸುತ್ತಾರೆಯೇ?" ಎಂದು ಪ್ರಶ್ನಿಸಿದ ಸುನಿತಾ ಕೇಜ್ರಿವಾಲ್, ಈ ವಿಚಾರದಲ್ಲಿ ತಮ್ಮ ಪತಿ ತುಂಬಾ ದುಃಖಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಬ್ಬ ಧೈರ್ಯಶಾಲಿ ಮತ್ತು ಪ್ರಾಮಾಣಿಕ ವ್ಯಕ್ತಿ. ಅವರ ಸಂಕಲ್ಪ ಬಲವಾಗಿದೆ ಎಂದು ದೆಹಲಿ ಸಿಎಂ ಪತ್ನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT