ನಿರ್ಮಲಾ ಸೀತಾರಾಮನ್ 
ದೇಶ

ನನ್ನ ಬಳಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ಇರಲಿಲ್ಲ ಆದ್ದರಿಂದ ಟಿಕೆಟ್ ನಿರಾಕರಿಸಿದೆ: ನಿರ್ಮಲಾ ಸೀತಾರಾಮನ್

ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡದೇ ಇರುವ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸ್ವತಃ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡದೇ ಇರುವ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸ್ವತಃ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವುದಕ್ಕೆ ಬೇಕಾಗಿರುವಷ್ಟು ಹಣ ತಮ್ಮ ಬಳಿ ಇಲ್ಲವಾದ್ದರಿಂದ ಟಿಕೆಟ್ ಆಫರ್ ನ್ನು ನಿರಾಕರಿಸಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಹಾಗೂ ತಮಿಳುನಾಡಿನಿಂದ ಲೋಕಸಭೆಗೆ ಸ್ಪರ್ಧಿಸುವಂತೆ ಅಹ್ವಾನ ನೀಡಿದ್ದರು. ಈ ಬಗ್ಗೆ ಒಂದು ವಾರ ಅಥವಾ 10 ದಿನಗಳು ಯೋಚನೆ ಮಾಡಿದ್ದೆ. ಆದರೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ಇಲ್ಲದ ಕಾರಣ ಸ್ಪರ್ಧೆಯ ಆಹ್ವಾನವನ್ನು ನಿರಾಕರಿಸಿದೆ ಎಂದು ಹೇಳಿದ್ದಾರೆ.

ಇನ್ನು ಆಂಧ್ರಪ್ರದೇಶದಿಂದ ಸ್ಪರ್ಧಿಸುವುದೋ ಅಥವಾ ತಮಿಳುನಾಡಿನಿಂದಲೋ ಎಂಬ ಬಗ್ಗೆಯೂ ಸಮಸ್ಯೆ ಇತ್ತು ಇದಷ್ಟೇ ಅಲ್ಲದೇ ಧರ್ಮ, ಜಾತಿ ಸೇರಿದಂತೆ ಗೆಲುವಿನ ಇನ್ನೂ ಹಲವು ಮಾನದಂಡಗಳ ಬಗ್ಗೆಯೂ ಪ್ರಶ್ನೆಗಳಿದ್ದವು ಆದ್ದರಿಂದ ಇವೆಲ್ಲವನ್ನೂ ನಿಭಾಯಿಸುವುದಕ್ಕೆ ನನಗೆ ಸಾಧ್ಯವಿಲ್ಲ ಎಂದೆನಿಸಿ ಟಿಕೆಟ್ ನಿರಾಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಟೈಮ್ಸ್ ನೌ ಶೃಂಗ 2024 ರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ನಿರ್ಮಲಾ ಸೀತಾರಾಮನ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!