ಕೇಜ್ರಿವಾಲ್ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಅರವಿಂದ್ ಕೇಜ್ರಿವಾಲ್ ED ಕಸ್ಟಡಿ ಅವಧಿ ಏಪ್ರಿಲ್ 1 ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ರೂಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 1ರವರೆಗೆ ವಿಸ್ತರಿಸಿದೆ.

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ರೂಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 1ರವರೆಗೆ ವಿಸ್ತರಿಸಿದೆ. ಎಎಪಿ ಮುಖ್ಯಸ್ಥರಾದ ಕೇಜ್ರಿವಾಲ್ ಅವರ ವಿಚಾರಣೆಗೆ ಏಳು ದಿನಗಳ ಕಸ್ಟಡಿಗೆ ಇಡಿ ಕೋರಿತ್ತು. ಆದರೆ ಏಪ್ರಿಲ್ 1 ರಂದು ಬೆಳಿಗ್ಗೆ 11 ಗಂಟೆಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ನ್ಯಾಯಾಲಯ ಹೇಳಿತ್ತು. ಗುರುವಾರ ಕಸ್ಟಡಿ ಅವಧಿ ಕೊನೆಗೊಳ್ಳುತ್ತಿದ್ದಂತೆಯೇ, ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಇಡಿ ಹಾಜರುಪಡಿಸಿತು.

ಕಸ್ಟಡಿ ವಿಚಾರಣೆ ಸಮಯದಲ್ಲಿ ಐದು ದಿನಗಳಲ್ಲಿ ಅವರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಅವರು ತಪ್ಪಿಸಿಕೊಳ್ಳುವ ಉತ್ತರ ನೀಡುತ್ತಿದ್ದಾರೆ ಎಂದು ಇಡಿ ಹೊಸ ರಿಮಾಂಡ್ ಅರ್ಜಿಯಲ್ಲಿ ಹೇಳಿತು. ಕಸ್ಟಡಿ ಅವಧಿಯಲ್ಲಿ ಇತರ ಮೂವರ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ. ಸ್ವತಃ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೇಜ್ರಿವಾಲ್, ಎಎಪಿ ಭ್ರಷ್ಟವಾಗಿದೆ ಎಂಬ ಹೊಗೆ ಪರದೆಯನ್ನು ರಾಷ್ಟ್ರದ ಮುಂದೆ ಸೃಷ್ಟಿಸಲಾಗಿದೆ ಎಂದು ಹೇಳಿದರು. ತಮ್ಮ ಪರ ವಕೀಲರು ಹಾಜರಿದ್ದರೂ ನ್ಯಾಯಾಲಯದಿಂದ ಅನುಮತಿ ಪಡೆದು ಹಿಂದಿಯಲ್ಲಿ ತಮ್ಮ ಹೇಳಿಕೆಯನ್ನು ನ್ಯಾಯಾಲಯದ ಮುಂದೆ ಕೇಜ್ರಿವಾಲ್ ಮಂಡಿಸಿದರು.

ಅವರನ್ನು ಇಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಲಯಕ್ಕೆ ಹಾಜರುಪಡಿಸಿ ಏಳು ದಿನಗಳ ಹೆಚ್ಚಿನ ಕಸ್ಟಡಿಗೆ ಕೋರಿದ್ದರಿಂದ ತಮ್ಮ ಅಹವಾಲನ್ನು ಸಲ್ಲಿಸಿದರು. ಪ್ರಕರಣದೊಂದಿಗೆ ಸಂಬಂಧ ಹೊಂದಿರುವ ಕೆಲವು ಜನರ ವಿಚಾರಣೆಯ ಅಗತ್ಯವಿದೆ ಎಂದು ವಾದಿಸಿದರು. ಕೇಜ್ರಿವಾಲ್ ಅವರು ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡುತ್ತಿದ್ದಾರೆ ಮತ್ತು ಅವರ ಡಿಜಿಟಲ್ ಸಾಧನಗಳ ಪಾಸ್‌ವರ್ಡ್‌ಗಳನ್ನು ಬಹಿರಂಗಪಡಿಸುತ್ತಿಲ್ಲ ಎಂದು ಇಡಿ ಹೇಳಿತು.

ಅಬಕಾರಿ ನೀತಿ ಪ್ರಕರಣದಲ್ಲಿ ನಾಲ್ವರು ಸಾಕ್ಷಿಗಳಿಂದ ನನನ್ನು ಆರೋಪಿತನಾಗಿ ಮಾಡಲಾಗಿದೆ. ಹಾಲಿ ಸಿಎಂ ಅನ್ನು ಬಂಧಿಸಲು ನಾಲ್ಕು ಹೇಳಿಕೆಗಳು ಸಾಕೇ? ಎಂದು ಪ್ರಶ್ನಿಸಿದ ಕೇಜ್ರಿವಾಲ್, ಶರತ್ ಚಂದ್ರರೆಡ್ಡಿ ಬಿಜೆಪಿಗೆ 55 ಕೋಟಿ ದೇಣಿಗೆ ನೀಡಿದ್ದಾರೆ "ನನ್ನ ಬಳಿ ಇದಕ್ಕೆ ಪುರಾವೆಗಳಿವೆ ಎಂದು ಹೇಳಿದರು. ರೆಡ್ಡಿ ಅವರು ಅರಬಿಂದೋ ಫಾರ್ಮಾ ಲಿಮಿಟೆಡ್‌ನ ನಿರ್ದೇಶಕರಾಗಿದ್ದು, ಪ್ರಕರಣದಲ್ಲಿ ಸಹ-ಆರೋಪಿ-ಅನುಮೋದಕರಲ್ಲಿ ಒಬ್ಬರಾಗಿದ್ದಾರೆ. ಎಎಪಿ ಭ್ರಷ್ಟವಾಗಿದೆ ಎಂಬ ಹೊಗೆ ಪರದೆಯನ್ನು ರಾಷ್ಟ್ರದ ಮುಂದೆ ಸೃಷ್ಟಿಸಲಾಗಿದೆ ಎಂದು ಹೇಳಿದ ಕೇಜ್ರಿವಾಲ್, ಇಡಿ ತನಿಖೆ ಎದುರಿಸಲು ಸಿದ್ಧ ಎಂದು ಹೇಳಿದರು. ಈ ಪ್ರಕರಣದಲ್ಲಿ ಮಾರ್ಚ್ 21 ರಂದು ಎಎಪಿ ರಾಷ್ಟ್ರೀಯ ಸಂಚಾಲಕರನ್ನು ಇಡಿ ಬಂಧಿಸಿತ್ತು. ನಂತರ, ನ್ಯಾಯಾಲಯ ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT