ಸಿಎಂ ಏಕನಾಥ್ ಶಿಂಧೆ ಅವರೊಂದಿಗೆ ನಟ ಗೋವಿಂದ 
ದೇಶ

ಸಿಎಂ ಏಕನಾಥ್ ಶಿಂಧೆ ಸಮ್ಮುಖದಲ್ಲಿ ನಟ ಗೋವಿಂದ ಶಿವಸೇನೆ ಸೇರ್ಪಡೆ!

ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಮುಂಬೈ: ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಈ ತಿಂಗಳ ಆರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರೊಂದಿಗೆ ಗೋವಿಂದ ಸಭೆ ನಡೆಸಿದ್ದರು. ಕಳೆದ ವಾರ ನಡೆದ ಈ ಸಭೆಯ ಸಂದರ್ಭದಲ್ಲಿ ಅವರ ರಾಜಕೀಯಕ್ಕೆ ಮರಳುವ ವದಂತಿಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಗೋವಿಂದ ರಾಜಕೀಯ ಕ್ಷೇತ್ರಕ್ಕೆ ಹೊಸಬರಲ್ಲ. 2004 ರಲ್ಲಿ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಯಶಸ್ವಿಯಾಗಿ ಸ್ಪರ್ಧಿಸುವ ಮೂಲಕ ಹಿರಿಯ ಬಿಜೆಪಿ ನಾಯಕ ರಾಮ್ ನಾಯಕ್ ಅವರನ್ನು ಸೋಲಿಸಿದ್ದರು. ಆದರೆ, ಬಳಿಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT