300 ಅಡಿ ಆಳದ ಕಮರಿಗೆ ಉರುಳಿದ ಎಸ್‌ಯುವಿ 
ದೇಶ

ಜಮ್ಮು ಮತ್ತು ಕಾಶ್ಮೀರ: 300 ಅಡಿ ಆಳದ ಕಮರಿಗೆ ಬಿದ್ದ ಎಸ್‌ಯುವಿ; 10 ಮಂದಿ ದಾರುಣ ಸಾವು

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್‌ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬನಿಹಾಲ್/ಜಮ್ಮು: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್‌ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಹನವು ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿತ್ತು ಮತ್ತು ಅದು ಜಿಲ್ಲೆಯ ಬ್ಯಾಟರಿ ಚೆಶ್ಮಾ ಪ್ರದೇಶದಲ್ಲಿ 1.15 ರ ಸುಮಾರಿಗೆ 300 ಅಡಿ ಆಳದ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಹತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.

ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳದಲ್ಲಿದ್ದಾರೆ.

ಭಾರಿ ಮಳೆಯ ನಡುವೆಯೇ 10 ಪ್ರಯಾಣಿಕರ ಮೃತದೇಹಗಳನ್ನು ಕಮರಿಯಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಿನ ಚಾಲಕ ಜಮ್ಮುವಿನ ಅಂಬ್ ಘೋಥಾದ ಬಲ್ವಾನ್ ಸಿಂಗ್ (47) ಮತ್ತು ಬಿಹಾರದ ಪಶ್ಚಿಮ ಚಂಪಾರಣ್‌ನ ವಿಪಿನ್ ಮುಖಿಯಾ ಭೈರಗಾಂಗ್ ಮೃತಪಟ್ಟವರಲ್ಲಿ ಸೇರಿದ್ದಾರೆ ಎಂದು ಅವರು ಹೇಳಿದರು.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT