ಕಡಲ್ಗಳ್ಳರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ 
ದೇಶ

ಮತ್ತೆ ಸೊಮಾಲಿಯ ಕಡಲ್ಗಳ್ಳರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ: 23 ಪಾಕಿಸ್ತಾನಿ ಪ್ರಜೆಗಳ ರಕ್ಷಣೆ, ಇರಾನ್ ಹಡಗು ಬಂಧಮುಕ್ತ!

ಅರೇಬಿಯನ್ ಸಮುದ್ರದಲ್ಲಿ ಮತ್ತೆ ಬಾಲ ಬಿಚ್ಚಿದ್ದ ಸೊಮಾಲಿಯಾ ಕಡಲ್ಗಳ್ಳರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಸತತ ಕಾರ್ಯಾಚರಣೆ ನಡೆಸಿ 23 ಪಾಕಿಸ್ತಾನಿ ಪ್ರಜೆಗಳ ರಕ್ಷಣೆ ಮಾಡಿದ್ದಲ್ಲದೇ ಇರಾನ್ ಮೂಲದ ಸರಕ ಸಾಗಾಣಿಕಾ ಹಡಗನ್ನು ಬಂಧಮುಕ್ತಗೊಳಿಸಿದೆ.

ನವದೆಹಲಿ: ಅರೇಬಿಯನ್ ಸಮುದ್ರದಲ್ಲಿ ಮತ್ತೆ ಬಾಲ ಬಿಚ್ಚಿದ್ದ ಸೊಮಾಲಿಯಾ ಕಡಲ್ಗಳ್ಳರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಸತತ ಕಾರ್ಯಾಚರಣೆ ನಡೆಸಿ 23 ಪಾಕಿಸ್ತಾನಿ ಪ್ರಜೆಗಳ ರಕ್ಷಣೆ ಮಾಡಿದ್ದಲ್ಲದೇ ಇರಾನ್ ಮೂಲದ ಸರಕ ಸಾಗಾಣಿಕಾ ಹಡಗನ್ನು ಬಂಧಮುಕ್ತಗೊಳಿಸಿದೆ.

ಇರಾನ್ ಮೂಲದ ಮೀನುಗಾರಿಕಾ ಹಡಗು (ಎಫ್‌ವಿ), ಅಲ್-ಕಂಬರ್ ಮೇಲೆ ದಾಳಿ ನಡೆಸಿದ್ದ ಸೊಮಾಲಿಯ ಕಡಲ್ಗಳ್ಳರು ಹಡಗನ್ನು ಹೈಜಾಕ್ ಮಾಡಿದ್ದರು. ಈ ವಿಚಾರ ತಿಳಿಯುತ್ತಲೇ ಭಾರತೀಯ ನೌಕಾಪಡೆಯ ಐಎನ್ಎಸ್ ಸುಮೇಧಾ ಮತ್ತು ಐಎನ್ಎಸ್ ತ್ರಿಶೂಲ್ ನೌಕೆಗಳು ಅಲ್-ಕಂಬರ್ ಹಡಗನ್ನು ಸುತ್ತುವರೆದು ಸುಮಾರು 12 ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿತು. ಈ ವೇಳೆ ಸೊಮಾಲಿಯಾ ಕಡಲ್ಗಳ್ಳರು ಶರಣಾಗುವಂತೆ ಮಾಡಲಾಯಿತು.

ಈ ಹಡಗಿನಲ್ಲಿ ಸುಮಾರು 23 ಜನ ಪಾಕಿಸ್ತಾನ ಮೂಲದ ಪ್ರಜೆಗಳಿದ್ದು, ಎಲ್ಲರನ್ನೂ ನೌಕಾಪಡೆ ರಕ್ಷಣೆ ಮಾಡಿದೆ. ಪ್ರಸ್ತುತ ಹಡಗನ್ನು ಸೇನೆ ತನ್ನ ವಶಕ್ಕೆ ಪಡೆದಿದ್ದು, ಸಾಮಾನ್ಯ ಮೀನುಗಾರಿಕೆ ಚಟುವಟಿಕೆಗಳನ್ನು ಪುನರಾರಂಭಿಸಲು ಸುರಕ್ಷಿತ ಪ್ರದೇಶಕ್ಕೆ ಬೆಂಗಾವಲು ಮಾಡಲು ಭಾರತೀಯ ನೌಕಾಪಡೆಯ ತಜ್ಞ ತಂಡಗಳು ಪ್ರಸ್ತುತ ಹಡಗಿನ ಸಂಪೂರ್ಣ ನೈರ್ಮಲ್ಯ ಮತ್ತು ಸಮುದ್ರ ಯೋಗ್ಯತೆಯ ತಪಾಸಣೆಗಳನ್ನು ಕೈಗೊಳ್ಳುತ್ತಿವೆ ಎಂದು ನೌಕಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರತೀಯ ನೌಕಾಪಡೆಯ ಪ್ರಕಾರ, ಒಂಬತ್ತು ಶಸ್ತ್ರಸಜ್ಜಿತ ಕಡಲ್ಗಳ್ಳರು ಅಲ್ ಕಂಬರ್ ಹಡಗನ್ನು ಹತ್ತಿದಾಗ ಹಡಗು ಸೊಕೊಟ್ರಾದ ನೈಋತ್ಯಕ್ಕೆ ಸರಿಸುಮಾರು 90 ನಾಟಿಕಲ್ ಮೈಲುಗಳಷ್ಟು ದೂರದಲ್ಲಿತ್ತು. ವಿಚಾರ ಭಾರತೀಯ ನೌಕಾಪಡೆಗೆ ತಿಳಿಯುತ್ತಲೇ ಐಎನ್ಎಸ್ ಸುಮೇಧಾ ಮತ್ತು ಐಎನ್ಎಸ್ ತ್ರಿಶೂಲ್ ನೌಕೆಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಯಿತು.

ಎರಡೂ ನೌಕೆಗಳು ಅಲ್ ಕಂಬರ್ ಹಡಗನ್ನು ಸುತ್ತುವರೆದು ಮಾರ್ಚ್ 29 ರ ಮುಂಜಾನೆ ಹಡಗಿನೊಳಗೆ ಭಾರತೀಯ ನೌಕಾಪಡೆಯ ಸೈನಿಕರು ನುಗ್ಗಿ ಸೊಮಾಲಿಯ ಕಡಲ್ಗಳ್ಳರ ವಿರುದ್ಧ ಕಾರ್ಯಾಚರಣೆ ನಡೆಸಿ ಶರಣಾಗುವಂತೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT