ಪ್ರಿಯಾಂಕಾ ಗಾಂಧಿ 
ದೇಶ

ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ರೀ ಎಂಟ್ರಿ: ಮೋದಿಜಿ ಭ್ರಷ್ಟರ ಕಳಂಕಗಳನ್ನೆಲ್ಲ ತೊಳೆಯುತ್ತಿದ್ದಾರೆ- ಪ್ರಿಯಾಂಕಾ ಗಾಂಧಿ

ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರು ಸೇರ್ಪಡೆಗೊಂಡಿರುವ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರು ಸೇರ್ಪಡೆಗೊಂಡಿರುವ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, '35,000 ಕೋಟಿ ರೂ. ಹಗರಣದ ಆರೋಪಿ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದಾರೆ. ಅವರ ವಿರುದ್ಧ 9 ಸಿಬಿಐ ಪ್ರಕರಣಗಳು ಸೇರಿದಂತೆ 20 ವಿವಿಧ ಪ್ರಕರಣಗಳಿವೆ. ಅರಣ್ಯ ಮತ್ತು ಗಣಿ ನಾಶದ ಆರೋಪಗಳಿವೆ. ಜಾಮೀನಿಗಾಗಿ ನ್ಯಾಯಾಧೀಶರನ್ನು 40 ಕೋಟಿ ರೂ.ಗೆ ಖರೀದಿಸುವ ಪ್ರಯತ್ನ ನಡೆದಿದೆ' ಎಂದು ದೂರಿದರು.

ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, 'ಬಿಜೆಪಿ ಅವರನ್ನು ಮುಕ್ತಕಂಠದಿಂದ ಸ್ವಾಗತಿಸುತ್ತಿದೆ. ಮೋದಿಜಿಯವರು ಬಿಜೆಪಿ ಎಂಬ ವಾಷಿಂಗ್ ಮೆಷಿನ್‌ನಲ್ಲಿ ದೇಶದಾದ್ಯಂತ ಇರುವ ಭ್ರಷ್ಟರನ್ನು ಆಯ್ದು ತೊಳೆಯುತ್ತಿದ್ದಾರೆ' ಎಂದು ಹೇಳಿದರು.

ಪ್ರಫುಲ್ ಪಟೇಲ್ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎಂಟು ತಿಂಗಳ ಹಿಂದೆ ಬಿಜೆಪಿಗೆ ಸೇರ್ಪಡೆಗೊಂಡ ಮಹಾರಾಷ್ಟ್ರದ ನಾಯಕರೊಬ್ಬರ ಪ್ರಕರಣದಲ್ಲಿ ಸಿಬಿಐ ಪ್ರಕರಣವನ್ನು ಮುಚ್ಚುವ ವರದಿ ಸಲ್ಲಿಸಿದೆ ಎಂದು ನಿನ್ನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಒಂದು ಕಾಲದಲ್ಲಿ ಸಾವಿರಾರು ಕೋಟಿ ಹಗರಣದ ಆರೋಪ ಮಾಡಿದ್ದ ಪ್ರಧಾನಿ, ಈಗ ಅದೇ ವ್ಯಕ್ತಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಕಳಂಕಗಳನ್ನೆಲ್ಲ ತೊಳೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳ ದುರುಪಯೋಗ ಒಂದು ಕಡೆ, ಕುಖ್ಯಾತ ಭ್ರಷ್ಟರಿಗೆ ರಕ್ಷಣೆ ನೀಡುವುದು, ಪ್ರತಿಪಕ್ಷಗಳ ನಾಯಕರನ್ನು ತನಿಖಾ ಸಂಸ್ಥೆಗಳ ಮೂಲಕ ಬೆದರಿಸಿ, ತಮ್ಮ ತೆಕ್ಕೆಗೆ ತೆಗೆದುಕೊಂಡು ಕೇಸುಗಳನ್ನು ಮುಚ್ಚಿ ಹಾಕುವುದು ನಡೆಯುತ್ತಿದ್ದರೆ, ಇನ್ನೊಂದು ಕಡೆಯಲ್ಲಿ ಸುಳ್ಳು ಪ್ರಕರಣಗಳ ಮೂಲಕ, ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಪ್ರತಿಪಕ್ಷಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT