ಸಿಬಿಐ  online desk
ದೇಶ

ಭೂ ಕಬಳಿಕೆ ಪ್ರಕರಣ: ಶಹಜಹಾನ್ ನ ನಾಪತ್ತೆಯಾಗಿರುವ ಸಹೋದರನಿಗೆ ಸಿಬಿಐ ಸಮನ್ಸ್ ಜಾರಿ!

ಕೇಂದ್ರೀಯ ತನಿಖಾ ದಳ (ಸಿಬಿಐ) ಸಂದೇಶ್ ಖಲಿಯಲ್ಲಿ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಶಹಜಹಾನ್ ನ ನಾಪತ್ತೆಯಾಗಿರುವ ಸಹೋದರನಿಗೆ ಸಮನ್ಸ್ ಜಾರಿ ಮಾಡಿದೆ.

ಕೋಲ್ಕತ್ತ: ಕೇಂದ್ರೀಯ ತನಿಖಾ ದಳ (ಸಿಬಿಐ) ಸಂದೇಶ್ ಖಲಿಯಲ್ಲಿ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಶಹಜಹಾನ್ ನ ನಾಪತ್ತೆಯಾಗಿರುವ ಸಹೋದರನಿಗೆ ಸಮನ್ಸ್ ಜಾರಿ ಮಾಡಿದೆ.

ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧನಕ್ಕೊಳಗಾಗಿದ್ದು, ಪಕ್ಷದಿಂದ ಅಮಾನತುಗೊಂಡಿದ್ದಾರೆ. ಶಹಜಹಾನ್ ಸಹೋದರ ಶೇಖ್ ಸಿರಾಜುದ್ದೀನ್ ಈ ಭೂಕಬಳಿಕೆ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಈಗ ನಾಪತ್ತೆಯಾಗಿದ್ದಾನೆ.

"ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 6 ರಂದು ಕೋಲ್ಕತ್ತಾ ಕಚೇರಿಯಲ್ಲಿ ನಮ್ಮ ಅಧಿಕಾರಿಗಳ ಮುಂದೆ ಹಾಜರಾಗುವಂತೆ ನಾವು ಶಾಜಹಾನ್ ಅವರ ಸಹೋದರನಿಗೆ ಸಮನ್ಸ್ ನೀಡಿದ್ದೇವೆ. ನಮ್ಮ ಅಧಿಕಾರಿಗಳು ಅವರನ್ನು ಹುಡುಕಲು ಅವರ ನಿವಾಸಕ್ಕೆ ಹೋದರು ಆದರೆ ಅವರು ಅಲ್ಲಿ ಇರಲಿಲ್ಲ" ಎಂದು ಅಧಿಕಾರಿ ಪಿಟಿಐಗೆ ತಿಳಿದ್ದಾರೆ.

ಸಿರಾಜುದ್ದೀನ್ ನಿವಾಸದಿಂದ ತೆರಳುವ ಮುನ್ನ ಸಿಬಿಐ ಅಧಿಕಾರಿಗಳು ಅವರ ನಿವಾಸದ ಮುಂಭಾಗ ‘ಸಮನ್ಸ್’ ನೋಟಿಸ್ ಅಂಟಿಸಿದ್ದರು.

ಸಿಬಿಐ ಅಧಿಕಾರಿಗಳ ಮತ್ತೊಂದು ತಂಡ ಬುಧವಾರ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ ಖಾಲಿಯಲ್ಲಿರುವ 'ಶಾಜಹಾನ್ ಮಾರುಕಟ್ಟೆ'ಗೆ ತೆರಳಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಅಂಗಡಿಯವರೊಂದಿಗೆ ಮಾತನಾಡಿರುವುದಾಗಿ ಹೇಳಿದೆ.

"ಈ ಉದ್ಯಮಿಗಳು ಶಾಜಹಾನ್‌ಗೆ ನಿಕಟರಾಗಿದ್ದರು ಮತ್ತು ಹಗರಣದಲ್ಲಿ ಪಾತ್ರ ವಹಿಸಿರಬಹುದು. ನಮ್ಮ ಅಧಿಕಾರಿಗಳು ಅವರೊಂದಿಗೆ ಮಾತನಾಡಿದ್ದಾರೆ" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel