ಪ್ರಿಯಾಂಕಾ ವಾದ್ರಾ TNIE
ದೇಶ

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗುವುದನ್ನು ತಡೆಯಲು ಮೋದಿ, ಶಾ ಕೈಯಲ್ಲೂ ಆಗಿಲ್ಲ: ಪ್ರಿಯಾಂಕಾ ವಾದ್ರಾ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆರೋಪಕ್ಕೆ ಉತ್ತರವಾಗಿ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ.

ಗುವಾಹಟಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆರೋಪಕ್ಕೆ ಉತ್ತರವಾಗಿ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ.

ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಉಲ್ಲೇಖಿಸಿದ ಅವರು, ಪ್ರಜ್ವಲ್ ರೇವಣ್ಣ ದೇಶದಿಂದ ಪಲಾಯನ ಮಾಡಲು ಬಿಜೆಪಿ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡಿರಬೇಕು. ಬಿಜೆಪಿ ಪಕ್ಷಕ್ಕೆ ನಂಟು ಹೊಂದಿರುವ ವ್ಯಕ್ತಿಯೊಬ್ಬ ಇಂತಹ ಅಪರಾಧ ಎಸಗಿದ್ದಾನೆ. ಸಾವಿರಾರು ವೀಡಿಯೊಗಳು ಹೊರಬಂದಿವೆ. ಇನ್ನು ಲೋಕಸಭೆ ಚುನಾವಣೆ ವೇಳೆ ಮೋದಿಜಿ ಅಪರಾಧ ಎಸಗಿದ ವ್ಯಕ್ತಿ ಪರ ಮತಯಾಚಿಸಿದ್ದಾರೆ.

ಅಸ್ಸಾಂನಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ವಾದ್ರಾ. ಉನ್ನಾವೊ ಮತ್ತು ಹತ್ರಾಸ್‌ನಲ್ಲಿ ಮಹಿಳೆಯರ ವಿರುದ್ಧ ಅಪರಾಧ ಎಸಗಿದವರನ್ನು ವಿರುದ್ಧ ಬಿಜೆಪಿ ಮೌನ ವಹಿಸಿದ್ದು ಆರೋಪಿಗಳನ್ನು ರಕ್ಷಿಸಿದೆ. ಕಳೆದ ವರ್ಷ ಮಣಿಪುರದಲ್ಲಿ ನಡೆದ ಹಿಂಸಾಚಾರದ ನಡುವೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಕೇಸರಿ ಪಾರ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಣಿಪುರದಲ್ಲಿ ಭದ್ರತಾ ಸಿಬ್ಬಂದಿಯೊಬ್ಬರ ಪತ್ನಿಯನ್ನು ವಿವಸ್ತ್ರಗೊಳಿಸಿ ಸಾರ್ವಜನಿಕವಾಗಿ ಪರೇಡ್ ಮಾಡಲಾಗಿತ್ತು. ಎಲ್ಲರೂ ಆ ವಿಡಿಯೋ ನೋಡಿದ್ದಾರೆ. ಮೋದಿ ಮತ್ತು ಅಮಿತ್ ಶಾ ಹೇಗೆ ಮೌನವಾಗಿದ್ದಾರೆ? ಮಹಿಳೆಯನ್ನು ರಕ್ಷಿಸಲು ಬಂದಿಲ್ಲ. ಯಾವುದೇ ಕ್ರಮ ಕೈಗೊಂಡಿಲ್ಲ ಎಲ್ಲೆಂದರಲ್ಲಿ ಅಪರಾಧಗಳು ನಡೆಯಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ಪ್ರಿಯಾಂಕಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ನಂತರ ಕುಸ್ತಿಪಟುಗಳೊಂದಿಗೆ ಮೋದಿ ಫೋಟೋಗಳನ್ನು ಕ್ಲಿಕ್ಕಿಸಿದರು. ಅದೇ ಮಹಿಳೆಯರು ಬಿಜೆಪಿ ಸಂಸದನ ವಿರುದ್ಧ ಲೈಂಗಿಕ ದೌರ್ಜನ್ಯದ ವಿರುದ್ಧ ಆರೋಪ ಮಾಡಿದ್ದರೂ ಅವರ ಸಹಾಯಕ್ಕೆ ಬಾರದ ಮೋದಿ ಮೌನವಹಿಸಿದ್ದರು. ಪ್ರಧಾನಿಯನ್ನು 'ಅಹಂಕಾರಿ' ಎಂದು ಕರೆದ ಪ್ರಿಯಾಂಕಾ, ಮೋದಿ ವಾಸ್ತವದಿಂದ ದೂರ ಉಳಿದಿದ್ದಾರೆ. ದೇಶದ ಜನರ ದುಃಖದ ಬಗ್ಗೆ ಯಾವುದೇ ತಿಳುವಳಿಕೆಯಿಲ್ಲದೆ ದೂರ ಉಳಿದಿದ್ದಾರೆ ಎಂದು ಆರೋಪಿಸಿದರು.

ತಾನು ಪ್ರಾಮಾಣಿಕ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನನ್ನೂ ಮಾಡಿಲ್ಲ ಎಂದು ಆರೋಪಿಸುತ್ತಿದೆ. 10 ವರ್ಷಗಳಲ್ಲಿ ಬಿಜೆಪಿ ಗಳಿಸಿದ್ದಷ್ಟು ಹಣವನ್ನು 70 ವರ್ಷಗಳಲ್ಲಿ ಕಾಂಗ್ರೆಸ್ ಗಳಿಸಿಲ್ಲ. ಕೇವಲ 10 ವರ್ಷಗಳಲ್ಲಿ ಅವರು ಶ್ರೀಮಂತ ಪಕ್ಷವಾಗಿ ಹೊರಹೊಮ್ಮಿದ್ದಾರೆ. ದೇಶ ಮತ್ತು ಜಗತ್ತು ಮತ್ತು ನಾವು ಭ್ರಷ್ಟರು ಮತ್ತು ಅವರು ಪ್ರಾಮಾಣಿಕರು ಎಂದು ಅವರು ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT