ಅಧೀರ್ ರಂಜನ್ ಚೌಧರಿ 
ದೇಶ

'ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ': ಕಾಂಗ್ರೆಸ್ ಗೆ ಮುಜುಗರ ತಂದ ಅಧೀರ್ ರಂಜನ್ ಹೇಳಿಕೆ!

ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಮತ್ತು ಬಹರಂಪುರದ ಕಾಂಗ್ರೆಸ್ ಅಭ್ಯರ್ಥಿ ಅಧೀರ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು ಅಧೀರ್ ಅವರ ಈ ಹೇಳಿಕೆ ಇದೀಗ ಕಾಂಗ್ರೆಸ್ ಗೆ ಮುಜುಗರ ತಂದಿಟ್ಟಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಮತ್ತು ಬಹರಂಪುರದ ಕಾಂಗ್ರೆಸ್ ಅಭ್ಯರ್ಥಿ ಅಧೀರ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು ಅಧೀರ್ ಅವರ ಈ ಹೇಳಿಕೆ ಇದೀಗ ಕಾಂಗ್ರೆಸ್ ಗೆ ಮುಜುಗರ ತಂದಿಟ್ಟಿದೆ.

INDIA ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಟಿಎಂಸಿಯ ವಿರುದ್ಧ ಮಾತನಾಡಿರುವ ಅಧೀರ್ ರಂಜನ್ ಚೌಧರಿ ವಿರುದ್ಧ ಇದೀಗ ಟಿಎಂಸಿ ತಿರುಗಿ ಬಿದ್ದಿದೆ. ಅಲ್ಲದೆ ಕಾಂಗ್ರೆಸ್ ಅನ್ನು ಬಿಜೆಪಿಯ 'ಬಿ-ಟೀಮ್' ಎಂದು ಕರೆದಿದೆ.

ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಟಿಎಂಸಿ, ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆಯ ಮಾತುಕತೆ ವಿಫಲವಾಗಿರುವುದಕ್ಕೆ ಅಧೀರ್ ರಂಜನ್ ಚೌಧರಿ ಅವರನ್ನು ದೂಷಿಸಿದ್ದು, ಅವರನ್ನು ಬಂಗಾಳ ವಿರೋಧಿ ಎಂದು ಬಣ್ಣಿಸಿದೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಟಿಎಂಸಿ, ಬಂಗಾಳದಲ್ಲಿ ಬಿಜೆಪಿಯ ಕಣ್ಣು ಮತ್ತು ಕಿವಿಯಾಗಿ ಕೆಲಸ ಮಾಡಿದ್ದ ಅಧೀರ್ ರಂಜನ್ ಚೌಧರಿ ಅವರನ್ನು ಈಗ ಬಂಗಾಳದಲ್ಲಿ ಬಿಜೆಪಿಯ ಧ್ವನಿಯಾಗಿ ನೋಡಬಹುದು ಮತ್ತು ಕೇಳಬಹುದು ಎಂದು ಟೀಕಿಸಿದೆ.

ಬಿಜೆಪಿಗೆ ಮತ ಹಾಕುವಂತೆ ಬಿ-ಟೀಮ್ ಸದಸ್ಯರು ಬಹಿರಂಗವಾಗಿ ಹೇಗೆ ಕೇಳುತ್ತಿದ್ದಾರೆ ಎಂಬುದನ್ನು ಕೇಳಿ ಎಂದು ಟಿಎಂಸಿ ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಬಂಗಾಳಕ್ಕೆ ಸರಿಯಾದ ಹಕ್ಕುಗಳನ್ನು ನೀಡಲು ನಿರಾಕರಿಸಿದ ಮತ್ತು ನಮ್ಮ ಜನರ ಹಕ್ಕುಗಳನ್ನು ಕಸಿದುಕೊಂಡ ಪಕ್ಷ. ಬಾಂಗ್ಲಾ ವಿರೋಧಿಗಳು ಮಾತ್ರ ಬಿಜೆಪಿ ಪರ ಪ್ರಚಾರ ಮಾಡಬಹುದು. ಮೇ 13ರಂದು ಬಹರಂಪುರದ ಜನತೆ ಈ ವಂಚನೆಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಟ್ವೀಟಿಸಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದೆ. 42 ಲೋಕಸಭಾ ಸ್ಥಾನಗಳಲ್ಲಿ ಟಿಎಂಸಿ 22 ಸಂಸದರನ್ನು ಹೊಂದಿದೆ, ಬಿಜೆಪಿ 17 ಮತ್ತು ಕಾಂಗ್ರೆಸ್ ಎರಡು ಸಂಸದರನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT