ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ಆಸ್ತಿ ಘೋಷಣೆ; 20 ಕೋಟಿ ರೂ. ಮೌಲ್ಯ; ಆದ್ರೂ ಕಾರು, ಮನೆ ಇಲ್ಲ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 4.2 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸೇರಿದಂತೆ 20 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.

ರಾಯ್ ಬರೇಲಿ: ಲೋಕಸಭೆ ಚುನಾವಣೆಗೆ ಶುಕ್ರವಾರ ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 4.2 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸೇರಿದಂತೆ 20 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಆದರೆ ಅವರು ಯಾವುದೇ ಮನೆ ಅಥವಾ ಕಾರು ಇಲ್ಲ ಎಂದು ಹೇಳಿದ್ದಾರೆ.

4,33,60,519 ರೂಪಾಯಿ ಮೌಲ್ಯದ ಷೇರುಗಳು ಮತ್ತು 3,81,33,572 ರೂಪಾಯಿಗಳ ಮ್ಯೂಚುವಲ್ ಫಂಡ್‌, 26,25,157 ರೂಪಾಯಿಗಳ ಬ್ಯಾಂಕ್ ಬ್ಯಾಲೆನ್ಸ್ ಮತ್ತು 15,21,740 ರೂಪಾಯಿಗಳ ಚಿನ್ನದ ಬಾಂಡ್‌ಗಳು ಸೇರಿದಂತೆ 9,24,59,264 ರೂಪಾಯಿಗಳ ಚರಾಸ್ತಿ ಇದೆ. ಜೊತೆಗೆ 11,15,02,598 ರೂ. ಮೌಲ್ಯದ ಸ್ಥಿರಾಸ್ತಿ ಘೋಷಿಸಿದ್ದು, ಇವುಗಳಲ್ಲಿ ಪ್ರಸ್ತುತ 9,04,89,000 ಮೌಲ್ಯದ ಸ್ವಯಂ ಆಸ್ತಿಗಳು ಮತ್ತು 2,10,13,598 ಮೌಲ್ಯದ ಪಿತ್ರಾರ್ಜಿತ ಆಸ್ತಿ ಸೇರಿವೆ.

ತಮ್ಮ ಕೈಯಲ್ಲಿ 55,000 ರೂಪಾಯಿ ನಗದು ಮತ್ತು 49,79,184 ರೂಪಾಯಿ ಸಾಲ ಇದೆ. 2022-23ರ ಹಣಕಾಸು ವರ್ಷದ ಪ್ರಕಾರ ವಾರ್ಷಿಕ ಆದಾಯ 1,02,78,680 ರೂ. ಇದೆ ಎಂದು ರಾಹುಲ್ ಗಾಂಧಿ ತಮ್ಮ ನಾಮಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ರಾಹುಲ್ ಗಾಂಧಿ ಯಾವುದೇ ವಸತಿ ಅಪಾರ್ಟ್ಮೆಂಟ್ ಮತ್ತು ಕಾರು ಹೊಂದಿಲ್ಲ.

ಸ್ಥಿರ ಆಸ್ತಿಗಳಲ್ಲಿ ದೆಹಲಿಯ ಮೆಹ್ರೌಲಿ ಗ್ರಾಮದ ಸುಲ್ತಾನ್‌ಪುರದಲ್ಲಿ ಸುಮಾರು 3.778 ಎಕರೆ ವಿಸ್ತೀರ್ಣದ ಕೃಷಿ ಭೂಮಿಯನ್ನು ಅವರು ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಜಂಟಿಯಾಗಿ ಹೊಂದಿದ್ದಾರೆ ಮತ್ತು ಗುರುಗ್ರಾಮ್‌ನ ಸಿಗ್ನೇಚರ್ ಟವರ್ಸ್‌ನಲ್ಲಿರುವ 5,838 ಚದರ ಅಡಿ ಅಳತೆಯ ವಾಣಿಜ್ಯ ಅಪಾರ್ಟ್‌ಮೆಂಟ್‌ಗಳು(ಕಚೇರಿ ಸ್ಥಳ) ಸೇರಿವೆ. ಈ ಎರಡು ವಾಣಿಜ್ಯ ಅಪಾರ್ಟ್‌ಮೆಂಟ್‌ಗಳು ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು 9.05 ಕೋಟಿ ರೂ. ಎಂದು ತಿಳಿಸಿದ್ದಾರೆ.

ನಾಮಪತ್ರದ ಪ್ರಕಾರ, ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಟ್ರಿನಿಟಿ ಕಾಲೇಜಿನಿಂದ ಎಂಫಿಲ್ ಪದವಿ ಪಡೆದಿದ್ದು, ಫ್ಲೋರಿಡಾದ ರೋಲಿನ್ಸ್ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT