ರಾಹುಲ್ ಗಾಂಧಿ, ರಾಜನಾಥ್ ಸಿಂಗ್ 
ದೇಶ

ಚುನಾವಣಾ ಕಣದಿಂದ ಓಡಿಹೋಗುವವರು ದೇಶ ಮುನ್ನಡೆಸಲು ಬಯಸುತ್ತಾರೆ: ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಅಮೇಥಿಯಿಂದ ರಾಯ್ ಬರೇಲಿಗೆ ಲೋಕಸಭಾ ಕ್ಷೇತ್ರವನ್ನು ಬದಲಾಯಿಸಿದ್ದಕ್ಕಾಗಿ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಚುನಾವಣಾ ಕಣದಿಂದ ಓಡಿ ಹೋಗುವ ವ್ಯಕ್ತಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇವಡಿ ಮಾಡಿದ್ದಾರೆ.

ರೋಹ್ಟಕ್: ಅಮೇಥಿಯಿಂದ ರಾಯ್ ಬರೇಲಿಗೆ ಲೋಕಸಭಾ ಕ್ಷೇತ್ರವನ್ನು ಬದಲಾಯಿಸಿದ್ದಕ್ಕಾಗಿ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಚುನಾವಣಾ ಕಣದಿಂದ ಓಡಿ ಹೋಗುವ ವ್ಯಕ್ತಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇವಡಿ ಮಾಡಿದ್ದಾರೆ.

ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಅಮೇಥಿಯಿಂದ ಸ್ಪರ್ಧಿಸುವ ಧೈರ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. ಅವರು ದೇಶ ಮುನ್ನಡೆಸಬೇಕು ಎಂದು ಜನರು ಬಯಸಿದ್ದರು. ಅನೇಕ ಕಾಂಗ್ರೆಸ್ ನಾಯಕರು ಕೂಡಾ ಅವರು ಅಮೇಥಿಯಿಂದಲೇ ಸ್ಪರ್ಧಿಸಲಿ ಅಂದುಕೊಂಡಿದ್ದರು. ಆದರೆ, ಅವರು ಹೆದರಿ ಓಡಿ ಹೋಗಿದ್ದಾರೆ ಎಂದು ಟೀಕಿಸಿದರು. ಚುನಾವಣಾ ಕಣದಿಂದ ಓಡಿ ಹೋಗಿದ ಅವರಿಗೆ ಬೇರೆ ಹೆಸರು ಇಡಬೇಕು ಎಂದು ರಾಜನಾಥ್ ಸಿಂಗ್ ಹೇಳಿದರು.

ಲೋಕಸಭೆಯಲ್ಲಿ ಮೂರು ಅವಧಿಗೆ ಅಮೇಥಿ ಕ್ಷೇತ್ರವನ್ನು ಪ್ರತಿನಿಧಿಸಿದ ರಾಹುಲ್ ಗಾಂಧಿ 2019 ರಲ್ಲಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಆದರೆ ಅವರು ಕೇರಳದ ವಯನಾಡಿನಲ್ಲಿ ಗೆದ್ದಿದ್ದರು. ಪಾಕಿಸ್ತಾನದ ನಾಯಕ ಚೌಧರಿ ಫವಾದ್ ಹುಸೇನ್, ರಾಹುಲ್ ಗಾಂಧಿಯನ್ನು ಹೊಗಳಿದ್ದಕ್ಕಾಗಿ ಸಿಂಗ್ ಅವರು ಕಾಂಗ್ರೆಸ್ ಅನ್ನು ಟೀಕಿಸಿದರು. ಹುಸೇನ್ ಈ ಹಿಂದೆ ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ಬೆಂಬಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ