ಗ್ಯಾರಿ ಕಾಸ್ಪರೋವ್ ಮತ್ತು ರಾಹುಲ್ ಗಾಂಧಿ 
ದೇಶ

ಪ್ರಧಾನಿಗೆ ಸವಾಲು ಹಾಕುವ ಮೊದಲು 'ರಾಯ್ ಬರೇಲಿ' ಗೆಲ್ಲಿ: Rahul Gandhi ಕುರಿತ ವ್ಯಂಗ್ಯ ಮಾಡಿ ಸ್ಪಷ್ಟನೆ ನೀಡಿದ Kasparov

ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅವರ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದ ಮಾಜಿ ವಿಶ್ವ ಚೆಸ್ ಚಾಂಪಿಯನ್ ರಷ್ಯಾದ ಗ್ಯಾರಿ ಕ್ಯಾಸ್ಪರೋವ್ (garry kasparov) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿ: ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅವರ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದ ಮಾಜಿ ವಿಶ್ವ ಚೆಸ್ ಚಾಂಪಿಯನ್ ರಷ್ಯಾದ ಗ್ಯಾರಿ ಕ್ಯಾಸ್ಪರೋವ್ (garry kasparov) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಅಮೇಠಿ ಬಿಟ್ಟು ರಾಯ್ ಬರೇಲಿಯಿಂದ ಸ್ಪರ್ಧಿಸುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ನಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್‌ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ರಷ್ಯಾದ ಚೆಸ್‌ ಪಟು ಗ್ಯಾರಿ ಕಾಸ್ಪರೋವ್‌, 'ಭಾರತೀಯ ರಾಜಕೀಯದ ಕುರಿತಾದ ತಮ್ಮ "ಚಿಕ್ಕ ಜೋಕ್" ಇದಾಗಿದ್ದು, ನಾನು ರಾಜಕೀಯ ಪಂಡಿತನಲ್ಲ.. ಎಂದು ಹೇಳಿದ್ದಾರೆ.

ಈ ಹಿಂದೆ "ಉನ್ನತ ಪಟ್ಟಕ್ಕಾಗಿ ಸವಾಲು ಹಾಕುವ ಮೊದಲು ರಾಯ್ ಬರೇಲಿಯನ್ನು ಮೊದಲು ಗೆಲ್ಲಿರಿ" ಎಂದು ರಾಹುಲ್ ಗಾಂಧಿ ಕುರಿತು ಕ್ಯಾಸ್ಪರೋವ್ ವ್ಯಂಗ್ಯ ಮಾಡಿದ್ದರು. ಈ ಪೋಸ್ಟ್ ವ್ಯಾಪಕ ವೈರಲ್ ಆಗಿ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ತಮ್ಮ ಪ್ರಮಾದ ಅರಿವಾಗಿ ಕ್ಯಾಸ್ಪರೋವ್ ಸ್ಪಷ್ಟನೆ ನೀಡಿದ್ದಾರೆ. 61 ವರ್ಷ ವಯಸ್ಸಿನ ಕ್ಯಾಸ್ಪರೋವ್ 'ಇದು ಕೇವಲ ತಮಾಷೆ ಮತ್ತು ಅದನ್ನು ಜೋಕ್ ಆಗಿ ಮಾತ್ರ ನೋಡಬೇಕು ಎಂದು ಮನವಿ ಮಾಡಿದ್ದಾರೆ.

ರಾಯ್ ಬರೇಲಿಯಿಂದ ಗೆಲ್ಲಬೇಕು

ಗ್ಯಾರಿ ಕಾಸ್ಪರೋವ್ ಅವರು ತಮ್ಮ ಎಕ್ಸ್​​​ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಒಂದು ಪೋಸ್ಟ್​​​ನ್ನು ಹಾಕಿಕೊಂಡಿದ್ದರು. ರಾಹುಲ್​​ ಗಾಂಧಿ ಅವರೇ ನೀವು ಪ್ರಧಾನಿ ಆಗುವ ಕನಸು ಕಾಣುವ ಮೊದಲು ಹೆಚ್ಚಿನ ಸ್ಥಾನದಲ್ಲಿ, ರಾಯ್ ಬರೇಲಿಯಿಂದ ಗೆಲ್ಲಬೇಕು ಎಂದು ಗ್ಯಾರಿ ಅವರು ವ್ಯಂಗ್ಯವಾಗಿ ಟ್ವೀಟ್​​​​​ ಮಾಡಿದ್ದಾರೆ.

ಪುಟಿನ್ ಪ್ರಬಲ ಟೀಕಾಕಾರಾಗಿದ್ದ ಕ್ಯಾಸ್ಪರೋವ್

ಮಾಜಿ ವಿಶ್ವ ಚೆಸ್ ಚಾಂಪಿಯನ್, ಬರಹಗಾರ, ರಾಜಕೀಯ ತಜ್ಞ, ರಷ್ಯಾದ ಗ್ರ್ಯಾಂಡ್ ಮಾಸ್ಟರ್ ಗ್ಯಾರಿ ಕ್ಯಾಸ್ಪರೋವ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ವಿಮರ್ಶಕರು. ಇವರು ಒಂದು ಸಂಧರ್ಭದಲ್ಲಿ ಪುಟಿನ್ ಅವರನ್ನು ವಿಶ್ವದ ಅತ್ಯಂತ ಅಪಾಯಕಾರಿ ವ್ಯಕ್ತಿ ಎಂದು ಕರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT