ಗ್ಯಾರಿ ಕಾಸ್ಪರೋವ್ ಮತ್ತು ರಾಹುಲ್ ಗಾಂಧಿ 
ದೇಶ

ಪ್ರಧಾನಿಗೆ ಸವಾಲು ಹಾಕುವ ಮೊದಲು 'ರಾಯ್ ಬರೇಲಿ' ಗೆಲ್ಲಿ: Rahul Gandhi ಕುರಿತ ವ್ಯಂಗ್ಯ ಮಾಡಿ ಸ್ಪಷ್ಟನೆ ನೀಡಿದ Kasparov

ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅವರ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದ ಮಾಜಿ ವಿಶ್ವ ಚೆಸ್ ಚಾಂಪಿಯನ್ ರಷ್ಯಾದ ಗ್ಯಾರಿ ಕ್ಯಾಸ್ಪರೋವ್ (garry kasparov) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿ: ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅವರ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದ ಮಾಜಿ ವಿಶ್ವ ಚೆಸ್ ಚಾಂಪಿಯನ್ ರಷ್ಯಾದ ಗ್ಯಾರಿ ಕ್ಯಾಸ್ಪರೋವ್ (garry kasparov) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಅಮೇಠಿ ಬಿಟ್ಟು ರಾಯ್ ಬರೇಲಿಯಿಂದ ಸ್ಪರ್ಧಿಸುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ನಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್‌ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ರಷ್ಯಾದ ಚೆಸ್‌ ಪಟು ಗ್ಯಾರಿ ಕಾಸ್ಪರೋವ್‌, 'ಭಾರತೀಯ ರಾಜಕೀಯದ ಕುರಿತಾದ ತಮ್ಮ "ಚಿಕ್ಕ ಜೋಕ್" ಇದಾಗಿದ್ದು, ನಾನು ರಾಜಕೀಯ ಪಂಡಿತನಲ್ಲ.. ಎಂದು ಹೇಳಿದ್ದಾರೆ.

ಈ ಹಿಂದೆ "ಉನ್ನತ ಪಟ್ಟಕ್ಕಾಗಿ ಸವಾಲು ಹಾಕುವ ಮೊದಲು ರಾಯ್ ಬರೇಲಿಯನ್ನು ಮೊದಲು ಗೆಲ್ಲಿರಿ" ಎಂದು ರಾಹುಲ್ ಗಾಂಧಿ ಕುರಿತು ಕ್ಯಾಸ್ಪರೋವ್ ವ್ಯಂಗ್ಯ ಮಾಡಿದ್ದರು. ಈ ಪೋಸ್ಟ್ ವ್ಯಾಪಕ ವೈರಲ್ ಆಗಿ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ತಮ್ಮ ಪ್ರಮಾದ ಅರಿವಾಗಿ ಕ್ಯಾಸ್ಪರೋವ್ ಸ್ಪಷ್ಟನೆ ನೀಡಿದ್ದಾರೆ. 61 ವರ್ಷ ವಯಸ್ಸಿನ ಕ್ಯಾಸ್ಪರೋವ್ 'ಇದು ಕೇವಲ ತಮಾಷೆ ಮತ್ತು ಅದನ್ನು ಜೋಕ್ ಆಗಿ ಮಾತ್ರ ನೋಡಬೇಕು ಎಂದು ಮನವಿ ಮಾಡಿದ್ದಾರೆ.

ರಾಯ್ ಬರೇಲಿಯಿಂದ ಗೆಲ್ಲಬೇಕು

ಗ್ಯಾರಿ ಕಾಸ್ಪರೋವ್ ಅವರು ತಮ್ಮ ಎಕ್ಸ್​​​ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಒಂದು ಪೋಸ್ಟ್​​​ನ್ನು ಹಾಕಿಕೊಂಡಿದ್ದರು. ರಾಹುಲ್​​ ಗಾಂಧಿ ಅವರೇ ನೀವು ಪ್ರಧಾನಿ ಆಗುವ ಕನಸು ಕಾಣುವ ಮೊದಲು ಹೆಚ್ಚಿನ ಸ್ಥಾನದಲ್ಲಿ, ರಾಯ್ ಬರೇಲಿಯಿಂದ ಗೆಲ್ಲಬೇಕು ಎಂದು ಗ್ಯಾರಿ ಅವರು ವ್ಯಂಗ್ಯವಾಗಿ ಟ್ವೀಟ್​​​​​ ಮಾಡಿದ್ದಾರೆ.

ಪುಟಿನ್ ಪ್ರಬಲ ಟೀಕಾಕಾರಾಗಿದ್ದ ಕ್ಯಾಸ್ಪರೋವ್

ಮಾಜಿ ವಿಶ್ವ ಚೆಸ್ ಚಾಂಪಿಯನ್, ಬರಹಗಾರ, ರಾಜಕೀಯ ತಜ್ಞ, ರಷ್ಯಾದ ಗ್ರ್ಯಾಂಡ್ ಮಾಸ್ಟರ್ ಗ್ಯಾರಿ ಕ್ಯಾಸ್ಪರೋವ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ವಿಮರ್ಶಕರು. ಇವರು ಒಂದು ಸಂಧರ್ಭದಲ್ಲಿ ಪುಟಿನ್ ಅವರನ್ನು ವಿಶ್ವದ ಅತ್ಯಂತ ಅಪಾಯಕಾರಿ ವ್ಯಕ್ತಿ ಎಂದು ಕರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT