ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ 
ದೇಶ

Loksabha Election 2024: ವಯನಾಡು ಮತದಾರರಿಗೆ Rahul Gandhi ಅನ್ಯಾಯ, ರಾಜಕೀಯ ಅನೈತಿಕತೆ- CPI ಅಭ್ಯರ್ಥಿ

ವಯನಾಡು ಜೊತೆ ಜೊತೆಗೇ ರಾಹುಲ್ ಗಾಂಧಿ ರಾಯ್ ಬರೇಲಿಯಿಂದಲೂ ಸ್ಪರ್ಧೆ ಮಾಡುವ ಮೂಲಕ ಇಲ್ಲಿನ ಮತದಾರರಿಗೆ ಅನ್ಯಾಯ ಮಾಡಿದ್ದು, ಇದು ರಾಜಕೀಯ ಅನೈತಿಕತೆ ಎಂದು ಸಿಪಿಐ ಕಿಡಿಕಾರಿದೆ.

ಕೊಚ್ಚಿನ್: ವಯನಾಡು ಜೊತೆ ಜೊತೆಗೇ ರಾಹುಲ್ ಗಾಂಧಿ ರಾಯ್ ಬರೇಲಿಯಿಂದಲೂ ಸ್ಪರ್ಧೆ ಮಾಡುವ ಮೂಲಕ ಇಲ್ಲಿನ ಮತದಾರರಿಗೆ ಅನ್ಯಾಯ ಮಾಡಿದ್ದು, ಇದು ರಾಜಕೀಯ ಅನೈತಿಕತೆ ಎಂದು ಸಿಪಿಐ ಕಿಡಿಕಾರಿದೆ.

ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ ಪ್ರತಿಸ್ಪರ್ಧಿಯಾಗಿರುವ ಸಿಪಿಐ ಅಭ್ಯರ್ಥಿ ಆ್ಯನ್ನಿ ರಾಜಾ, ಕಾಂಗ್ರೆಸ್ ಯುವನಾಯಕನ ವಿರುದ್ಧ ಕಿಡಿಕಾರಿದರು. 'ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ಬರೇಲಿಯಿಂದ ನಾಮಪತ್ರ ಸಲ್ಲಿಸುವ ಮೂಲಕ ವಯನಾಡು ಮತದಾರರಿಗೆ ಅನ್ಯಾಯವೆಸಗಿದ್ದು, ಅವರು ಮೊದಲೇ ತಮ್ಮ ಉದ್ದೇಶವನ್ನು ಮತದಾರರಿಗೆ ತಿಳಿಸದೇ ಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ರಾಯ್ ಬರೇಲಿಯಿಂದಲೂ ಸ್ಪರ್ಧಿಸುವ ರಾಹುಲ್ ಗಾಂಧಿ ನಡೆ ವಯನಾಡಿನ "ಮತದಾರರಿಗೆ ಅನ್ಯಾಯ". ಇದು ಅವರ ರಾಜಕೀಯ ನೈತಿಕತೆಯ ಬಗ್ಗೆ ಪ್ರಶ್ನೆ ಏಳುವಂತೆ ಮಾಡುತ್ತದೆ. ವಯನಾಡ್ ಮತದಾರರಿಗೆ ತನ್ನ ಉದ್ದೇಶವನ್ನು ತಿಳಿಸದೆ, ರಾಹುಲ್ ಗಾಂಧಿ ಅವರಿಗೆ "ಅನ್ಯಾಯ" ಮಾಡುತ್ತಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧಿಸಬಹುದು.

ಆ ಪ್ರಜಾಪ್ರಭುತ್ವದ ಹಕ್ಕನ್ನು ರಾಹುಲ್ ಗಾಂಧಿ ಬಳಸಿಕೊಳ್ಳುತ್ತಿದ್ದಾರೆ. ಅವರು ರಾಯಬರೇಲಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಇದು ವಯನಾಡಿನ ಮತದಾರರಿಗೆ ಮಾಡಿದ ಅನ್ಯಾಯವಾಗಿದೆ. ಏಕೆಂದರೆ ಅವರು ಒಮ್ಮೆಯೂ ಈ ಬಗ್ಗೆ ಮತದಾರರ ಬಳಿ ಪ್ರಸ್ತಾಪಿಸಲಿಲ್ಲ ಎಂದು ಸಿಪಿಐ ಅಭ್ಯರ್ಥಿ ಆ್ಯನ್ನಿ ರಾಜಾ ಹೇಳಿದರು.

"ನೀವು ಮತದಾರರಿಗೆ ಸತ್ಯವನ್ನು ಹೇಳುವುದು ಮುಖ್ಯ ಮತ್ತು ನಂತರ ಯಾರಿಗೆ ಮತ ಹಾಕಬೇಕೆಂದು ಅವರು ನಿರ್ಧರಿಸುತ್ತಾರೆ. ಇದು ರಾಜಕೀಯ ನೈತಿಕತೆಗೆ ಸಂಬಂಧಿಸಿದ್ದಾಗಿದೆ ಎಂದು ಆ್ಯನ್ನಿ ರಾಜಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT