ಯುವಕನನ್ನು ಹೊಡೆದ ಕೊಂದ ಜನ 
ದೇಶ

'ಪವಿತ್ರ ಗ್ರಂಥ' ಹರಿದ ಎಂಬ ಕಾರಣಕ್ಕೆ 19 ವರ್ಷದ ಯುವಕನನ್ನು ಹೊಡೆದು ಕೊಂದ ಜನ; ಹತ್ಯೆಯ ಭೀಕರ ವಿಡಿಯೋ ವೈರಲ್!

ಶ್ರೀ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಕೊಂದಿರುವ ಅಮಾನವೀಯ ಘಟನೆ ಪಂಜಾಬ್‌ನ ಫಿರೋಜ್‌ಪುರದ ಗುರುದ್ವಾರದಲ್ಲಿ ನಡೆದಿದೆ.

ಫಿರೋಜ್‌ಪುರ: ಶ್ರೀ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಕೊಂದಿರುವ ಅಮಾನವೀಯ ಘಟನೆ ಪಂಜಾಬ್‌ನ ಫಿರೋಜ್‌ಪುರದ ಗುರುದ್ವಾರದಲ್ಲಿ ನಡೆದಿದೆ.

19 ವರ್ಷದ ಯುವಕ ತಲ್ಲಿ ಗುಲಾಮ್ ಗ್ರಾಮದ ನಿವಾಸಿ ಬಕ್ಷೀಶ್ ಸಿಂಗ್ ಅಲಿಯಾಸ್ ಗೋಲಾ ಬಂಡಾಲಾ ಗ್ರಾಮದಲ್ಲಿರುವ ಗುರುದ್ವಾರವನ್ನು ಪ್ರವೇಶಿಸಿದ ನಂತರ ಸಿಖ್ಖರ ಪವಿತ್ರ ಗ್ರಂಥ ಗುರು ಗ್ರಂಥ ಸಾಹಿಬ್ ಅನ್ನು ಹರಿದು ಹಾಕಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಸ್ಥಳದಲ್ಲೇ ಇದ್ದ ಗುಂಪು ಬಕ್ಷೀಶ್ ಸಿಂಗ್ ನನ್ನು ತೀವ್ರವಾಗಿ ಥಳಿಸಿತ್ತು. ನಂತರ ಪೊಲೀಸರು ಯುವಕನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ಅಷ್ಟರಲ್ಲೇ ಆತ ಸಾವನ್ನಪ್ಪಿದ್ದನು.

ಘಟನೆಯ ವಿಡಿಯೋ ಕೂಡ ಹೊರಬಿದ್ದಿದೆ. ಇದರಲ್ಲಿ ಜನರ ಗುಂಪೊಂದು ಮೊದಲು ಬಕ್ಷೀಶ್‌ನನ್ನು ಸುತ್ತುವರೆದು ನಂತರ ಥಳಿಸಿದೆ. ಬಳಿಕ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದನು.

ಬಕ್ಷೀಶ್ ಮಾನಸಿಕ ಅಸ್ವಸ್ಥನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಬಕ್ಷೀಶ್ ಸಿಂಗ್ ತಂದೆ ಲಖ್ವಿಂದರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಯುವಕನ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ತನ್ನ ಮಗನನ್ನು ಕೊಂದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಕ್ಷೀಶ್ ತಂದೆ ಪೊಲೀಸರನ್ನು ಆಗ್ರಹಿಸಿದ್ದಾರೆ. ಈ ಘಟನೆಯ ನಂತರ, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯ ಮಿಶ್ರಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಫಿರೋಜ್‌ಪುರದಲ್ಲಿ ನಡೆದ ಹತ್ಯಾಕಾಂಡದ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT