ಸಂಗ್ರಹ ಚಿತ್ರ 
ದೇಶ

ಭಾರತದ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು 23 ರಾಷ್ಟ್ರಗಳಿಂದ 75 ಪ್ರತಿನಿಧಿಗಳ ಆಗಮನ!

ಭಾರತದ ಚುನಾವಣಾ ಆಯೋಗವು ವಿಶ್ವದ ಅತಿದೊಡ್ಡ ಚುನಾವಣೆ ವೀಕ್ಷಿಸಲು 23 ದೇಶಗಳ ಚುನಾವಣಾ ನಿರ್ವಹಣಾ ಸಂಸ್ಥೆಗಳಿಂದ (ಇಎಂಬಿ) 75 ಅಂತರರಾಷ್ಟ್ರೀಯ ಸಂದರ್ಶಕರನ್ನು ಆಹ್ವಾನಿಸಿದೆ.

ನವದೆಹಲಿ: ಭಾರತದ ಚುನಾವಣಾ ಆಯೋಗವು ವಿಶ್ವದ ಅತಿದೊಡ್ಡ ಚುನಾವಣೆ ವೀಕ್ಷಿಸಲು 23 ದೇಶಗಳ ಚುನಾವಣಾ ನಿರ್ವಹಣಾ ಸಂಸ್ಥೆಗಳಿಂದ (ಇಎಂಬಿ) 75 ಅಂತರರಾಷ್ಟ್ರೀಯ ಸಂದರ್ಶಕರನ್ನು ಆಹ್ವಾನಿಸಿದೆ.

ಆಸ್ಟ್ರೇಲಿಯಾ, ರಷ್ಯಾ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ದೇಶ ಸೇರಿದಂತೆ 23 ದೇಶಗಳ ಚುನಾವಣಾ ನಿರ್ವಹಣಾ ಸಂಸ್ಥೆಗಳ ಪ್ರತಿನಿಧಿಗಳು ಲೋಕಸಭಾ ಚುನಾವಣಾ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳಲು ಭಾರತಕ್ಕೆ ಬಂದಿದ್ದಾರೆ. ಒಟ್ಟು 75 ಪ್ರತಿನಿಧಿಗಳು ಸಣ್ಣ ಗುಂಪುಗಳಲ್ಲಿ ಆರು ರಾಜ್ಯಗಳಿಗೆ ಭೇಟಿ ನೀಡಲಿದ್ದು, ವಿವಿಧ ಲೋಕಸಭಾ ಕ್ಷೇತ್ರಗಳ ಚುನಾವಣಾ ಸಿದ್ಧತೆಯನ್ನು ಅವಲೋಕಿಸಲಿದ್ದಾರೆ.

ಚುನಾವಣಾ ಪ್ರಕ್ರಿಯೆಯ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿರುವುದು ಇದೇ ಮೊದಲು ಎಂದು ಚುನಾವಣಾ ಆಯೋಗವು ಹೇಳಿದೆ. ಶನಿವಾರ ಆರಂಭವಾಗಿರುವ ಪ್ರವಾಸ ಕಾರ್ಯಕ್ರಮದಲ್ಲಿ ಭಾರತೀಯ ಚುನಾವಣಾ ವ್ಯವಸ್ಥೆಯ ಸೂಕ್ಷ್ಮತೆಗಳು ಮತ್ತು ಅಳವಡಿಸಿಕೊಂಡಿರುವ ಉತ್ತಮ ಪದ್ಧತಿಗಳನ್ನು ಪರಿಚಯಿಸಲಾಗುತ್ತದೆ. ವಿದೇಶಿ ಪ್ರತಿನಿಧಿಗಳು ಮಹಾರಾಷ್ಟ್ರ, ಗೋವಾ, ಗುಜರಾತ್, ಕರ್ನಾಟಕ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಭೂತಾನ್, ಮಂಗೋಲಿಯಾ, ಆಸ್ಟ್ರೇಲಿಯಾ, ಮಡಗಾಸ್ಕರ್, ಫಿಜಿ, ಕಿರ್ಗಿಜ್ ರಿಪಬ್ಲಿಕ್, ರಷ್ಯಾ, ಮೊಲ್ಡೊವಾ, ಟುನೀಶಿಯಾ, ಸೆಶೆಲ್ಸ್, ಕಾಂಬೋಡಿಯಾ, ನೇಪಾಳ, ಫಿಲಿಪೈನ್ಸ್, ಶ್ರೀಲಂಕಾ, ಜಿಂಬಾಬ್ವೆ, ಬಾಂಗ್ಲಾದೇಶ, ಕಝಾಕಿಸ್ತಾನ್, ಜಾರ್ಜಿಯಾ ಚಿಲಿ, ಉಜ್ಬೇಕಿಸ್ತಾನ್, ಮಾಲ್ಡೀವ್ಸ್, ಪಪುವಾ ನ್ಯೂ ಗಿನಿಯಾ ಮತ್ತು ನಮೀಬಿಯಾ ದೇಶಗಳಿಂದ ಒಟ್ಟಿ 75 ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಡಾ. ಸುಖಬೀರ್ ಸಿಂಗ್ ಸಂಧು ಅವರು ಮೇ 5 ರಂದು ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ,

ಭಾರತೀಯ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಸಂದರ್ಶಕರ ಕಾರ್ಯಕ್ರಮವನ್ನುಆಯೋಜಿಸುವ ಮೂಲಕ ಅಂತರರಾಷ್ಟ್ರೀಯ ಸಹಕಾರ ಉತ್ತೇಜಿಸುವುದನ್ನು ಮುಂದುವರೆಸಿದೆ ಎಂದು ECI ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ