ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ಮರಳು ಮಾಫಿಯಾ, ಟ್ರ್ಯಾಕ್ಟರ್‌ ಹರಿಸಿ ಎಎಸ್‌ಐ ಹತ್ಯೆ!

ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್‌ ಬಳಿ ಶನಿವಾರ ರಾತ್ರಿ ನಡೆದಿದೆ.

ಮಧ್ಯಪ್ರದೇಶ: ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್‌ ಬಳಿ ಶನಿವಾರ ರಾತ್ರಿ ನಡೆದಿದೆ.

ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡ ಗ್ರಾಮಕ್ಕೆ ಆಗಮಿಸಿದ ನಂತರ ಟ್ರಾಕ್ಟರ್ ಹರಿಸಿ ಎಎಸ್‌ಐ ಹತ್ಯೆ ಮಾಡಲಾಗಿದೆ.

ಶಹದೋಲ್‌ನ ನೌಧಿಯಾದಲ್ಲಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಮಹೇಂದ್ರ ಬಗ್ರಿ ಮತ್ತು ಅವರ ತಂಡವು ವಾರಂಟ್‌ನೊಂದಿಗೆ ಆರೋಪಿಯನ್ನು ಬಂಧಿಸಲು ಹೋಗಿದ್ದಾಗ ಎಎಸ್ ಐ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಗರ್ ತಿಳಿಸಿದ್ದಾರೆ.

ವಿಚಾರಣೆ ವೇಳೆ ಟ್ರ್ಯಾಕ್ಟರ್ ಮಾಲೀಕನ ಮಗನೂ ಇದರಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ..ಐಪಿಸಿ ಸೆಕ್ಷನ್ 302/34, 414, 379 ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT