ವಿದೇಶಾಂಕ ಸಚಿವ ಎಸ್ ಜೈಶಂಕರ್ PTI
ದೇಶ

ನಿಜ್ಜರ್‌ ಹತ್ಯೆ ಪ್ರಕರಣ: ಮೂವರು ಭಾರತೀಯರ ಬಂಧನ ಕುರಿತು ಕೆನಡಾ ಮಾಹಿತಿಗಾಗಿ ಕಾಯುತ್ತಿದ್ದೇವೆ; ಜೈಶಂಕರ್

ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಮೂವರು ಭಾರತೀಯರ ಬಂಧನದ ಕುರಿತು ಕೆನಡಾ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಹೇಳಿದ್ದಾರೆ.

ಭುವನೇಶ್ವರ್: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಮೂವರು ಭಾರತೀಯರ ಬಂಧನದ ಕುರಿತು ಕೆನಡಾ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಹೇಳಿದ್ದಾರೆ.

ಭುವನೇಶ್ವರಕ್ಕೆ ಎರಡು ದಿನಗಳ ಭೇಟಿ ನೀಡಿರುವ ಜೈಶಂಕರ್ ಅವರು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಂಕಿತರು ಹಲವು ರೀತಿಯ ಗ್ಯಾಂಗ್ ಚಟುವಟಿಕೆಗಳೊಂದಿಗೆ ಸಂಬಂಧವನ್ನು ಹೊಂದಿರುವ ಸಾಧ್ಯತೆಯಿದ್ದು, ಕೆನಡಾದ ಕಾನೂನು ಜಾರಿ ಅಧಿಕಾರಿಗಳಿಂದ ಸ್ಪಷ್ಟತೆ ಸಿಗಬೇಕಿದೆ. ಕೆನಡಾದಿಂದ ಪಂಜಾಬ್‌ ಮತ್ತಿತರ ಕಡೆ ಸಂಘಟಿತ ಅಪರಾಧಗಳನ್ನು ನಡೆಸುತ್ತಿರಯವ ಉಗ್ರರ ಬಗ್ಗೆ ಭಾರತದ ದೀರ್ಘಕಾಲದ ಕಳವಳವನ್ನು ಅವರು ಪುನರುಚ್ಚರಿಸಿದರು.

ಭಾರತೀಯರ ಬಂಧನ ಕುರಿತು ಮಾತನಾಡಿ, ಶಂಕಿತರು ಕೆಲವು ರೀತಿಯ ಗ್ಯಾಂಗ್ ಹಿನ್ನೆಲೆಯ ಭಾರತೀಯರು ಎಂದು ಹೇಳಲಾಗಿದೆ. ಕೆನಡಾ ಸರ್ಕಾರ ನಮಗೆ ಯಾವುದೇ ಪುರಾವೆಗಳನ್ನು ನೀಡಿಲ್ಲ. ವಾಸ್ತವವಾಗಿ, ಅವರ ಬಳಿ ಏನಾದರೂ ಇದ್ದರೆ, ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ನಾವು ಅವರಿಗೆ ಪದೇ ಪದೇ ಹೇಳಿದ್ದೇವೆ. ಭಾರತೀಯರ ಬಂಧನ ಕುರಿತು ಕೆನಡಾ ಪೊಲೀಸರು ನಮಗೆ ತಿಳಿಸುವ ತನಕ ನಾವು ಕಾಯಬೇಕಾಗಿದೆ ಎಂದು ಸ್ಪಷ್ಟಪಡಿಸಿದರು.

ಖಾಲಿಸ್ತಾನಿ ಪರವಿರುವವರ ಒಂದು ಗುಂಪು, ಕೆನಡಾದ ಪ್ರಜಾಪ್ರಭುತ್ವವನ್ನು ಬಳಸಿಕೊಂಡು ಲಾಬಿ ನಡೆಸುತ್ತಿದೆ. ಇವರೇ ಅಲ್ಲಿನ ಮತ ಬ್ಯಾಂಕ್‌ ಆಗಿದ್ದಾರೆ. ಆಡಳಿತಾರೂಡ ಪಕ್ಷಕ್ಕೆ ಸಂಸತ್ತಿನಲ್ಲಿ ಬಹುಮತವಿಲ್ಲ. ಕೆಲವು ಪಕ್ಷಗಳು ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕರನ್ನೇ ಅವಲಂಬಿಸಿವೆ. ಇಂತಹ ಅಂಶಗಳಿಗೆ ರಾಜಕೀಯ ಮಾನ್ಯತೆ ನೀಡಿದರೆ ನಿಮಗೂ ನಮಗೂ ಸಮಸ್ಯೆಯಾಗುತ್ತದೆ ಎಂದು ನಾವು ಅವರಿಗೆ ಹೇಳುತ್ತಲೇ ಬಂದಿದ್ದೇವೆ. ಆದರೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ತಮ್ಮ ಸರ್ಕಾರವನ್ನು ಉಳಿಸಲು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ.

ಕೆನಡಾದಲ್ಲಿರುವ ಖಲಿಸ್ತಾನಿಗಳ ಬಗ್ಗೆ ಭಾರತವು ಹೆಚ್ಚಿನ ವಿವರಗಳನ್ನು ತೆಗೆದುಕೊಂಡಿದೆ. ಕೆನಡಾದ ಸರ್ಕಾರಕ್ಕೂ ಖಲಿಸ್ತಾನಿಗಳ ಬಗ್ಗೆ ಮಾಹಿತಿಯಿದೆ. ಸಾಕಷ್ಟು ಮನವಿಗಳ ಹೊರತಾಗಿಯೂ ಅವರು ಯಾವುದೇ ಕ್ರಮ ಕೈಗೊಳ್ಳದಿರಲು ನಿರ್ಧರಿಸಿದ್ದಾರೆ.

ಮತ್ತೊಂದೆಡೆ, ಕೆನಡಾದಲ್ಲಿನ ಭಾರತದ ಹೈ ಕಮಿಷನರ್ ಸಂಜಯ್ ವರ್ಮಾ ಅವರು ಪರಿಸ್ಥಿತಿಯ ಬಗ್ಗೆ ಅವಲೋಕಿಸುತ್ತಿದ್ದಾರೆಂದು ಹೇಳಿದರು.

ಕೆನಡಾದ ಅಧಿಕಾರಿಗಳಿಂದ ಮಾಹಿತಿ ಸಿಗುವ ಭರವಸೆಯಿದೆ. ಈ ಸಮಸ್ಯೆಯು ಕೆನಡಾದ ಆಂತರಿಕ ವಿಚಾರವಾಗಿದ್ದು, ಭಾರತವು ಇದರಲ್ಲಿ ಮಧ್ಯ ಪ್ರವೇಶಿಸದೆ ದೂರ ಉಳಿಯಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT