ನೀಟ್ ಪರೀಕ್ಷೆ (ಸಂಗ್ರಹ ಚಿತ್ರ) online desk
ದೇಶ

NEET-UG ಪ್ರಶ್ನೆ ಪತ್ರಿಕೆ ಸೋರಿಕೆ?: ಸರ್ಕಾರ ಈ ಬಗ್ಗೆ ಹೇಳಿದ್ದೇನು ಅಂದರೆ...

ವೈದ್ಯಕೀಯ ಶಿಕ್ಷಣಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆ- ಎನ್ಇಇಟಿ-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಪ್ರಕಟವಾಗಿವೆ.

ನವದೆಹಲಿ: ವೈದ್ಯಕೀಯ ಶಿಕ್ಷಣಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆ- ಎನ್ಇಇಟಿ-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಪ್ರಕಟವಾಗಿವೆ.

ಈ ಬಗ್ಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಸ್ಪಷ್ಟನೆ ನೀಡಿದ್ದು, ಈ ವರದಿಗಳು ಆಧಾರ ರಹಿತ ಎಂದು ಹೇಳಿದೆ.

ಪ್ರತಿಯೊಂದು ಪ್ರಶ್ನೆ ಪತ್ರಿಕೆಯನ್ನೂ ಜಾಗರೂಕವಾಗಿಡಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆ ಪತ್ರಿಕೆಯ ಫೋಟೋಗೂ ನೈಜ ಪ್ರಶ್ನೆ ಪತ್ರಿಕೆಗಳಿಗೂ ಸಂಬಂಧವಿಲ್ಲ ಎಂದು ಎನ್ ಟಿಎ ಹೇಳಿದೆ.

“ಯಾವುದೇ ಪೇಪರ್ ಸೋರಿಕೆಯೆಂದು ತೋರಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ ಮತ್ತು ಯಾವುದೇ ಆಧಾರವಿಲ್ಲ ಎಂದು NTA ಯ ಭದ್ರತಾ ಪ್ರೋಟೋಕಾಲ್‌ಗಳು ಮತ್ತು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್‌ಗಳಿಂದ ಖಚಿತಪಡಿಸಲಾಗಿದೆ ಎಂದು ಎನ್ ಟಿಎ ಹಿರಿಯ ನಿರ್ದೇಶಕರಾದ ಸಾಧನಾ ಪರಾಶರ್ ಹೇಳಿದ್ದಾರೆ.

ಪರೀಕ್ಷೆ ಪ್ರಾರಂಭವಾದ ನಂತರ ಯಾವುದೇ ಬಾಹ್ಯ ವ್ಯಕ್ತಿ ಅಥವಾ ಸಂಸ್ಥೆಗಳು ಕೇಂದ್ರಗಳನ್ನು ಪ್ರವೇಶಿಸಲು ಸಾಧ್ಯವಿಲ್ಲ. ಪರೀಕ್ಷಾ ಕೇಂದ್ರಗಳ ಗೇಟ್‌ಗಳನ್ನು ಮುಚ್ಚಿದ ನಂತರ, ಸಿಸಿಟಿವಿ ಕಣ್ಗಾವಲು ಇರುವ ಸಭಾಂಗಣಗಳ ಒಳಗೆ ಹೊರಗಿನಿಂದ ಯಾರಿಗೂ ಪ್ರವೇಶವನ್ನು ಅನುಮತಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ವಿದೇಶದ 14 ನಗರಗಳು ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ ಭಾನುವಾರ ಪ್ರವೇಶ ಪರೀಕ್ಷೆ ನಡೆದಿದೆ. ರಾಜಸ್ಥಾನದ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪ್ರಶ್ನೆ ಪತ್ರಿಕೆಗಳನ್ನು ವಿತರಿಸಿದ್ದರಿಂದ ಕೆಲವು ಅಭ್ಯರ್ಥಿಗಳು ಪತ್ರಿಕೆಗಳೊಂದಿಗೆ ಹೊರನಡೆಯಲು ಕಾರಣವಾಯಿತು ಎಂದು ಎನ್‌ಟಿಎ ಭಾನುವಾರ ಹೇಳಿಕೊಂಡಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯ ಸುದ್ದಿಯನ್ನು ಎಂದು ಸಂಸ್ಥೆ ನಿರಾಕರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

SCROLL FOR NEXT