ಶಂಕಿತ ಉಗ್ರರ ರೇಖಾಚಿತ್ರ 
ದೇಶ

IAF ಬೆಂಗಾವಲು ವಾಹನಗಳ ಮೇಲೆ ದಾಳಿ: ಶಂಕಿತ ಉಗ್ರರ 'ರೇಖಾಚಿತ್ರ' ಬಿಡುಗಡೆ

ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ (ಐಎಎಫ್) ವಾಹನಗಳ ಮೇಲೆ ದಾಳಿ ನಡೆಸಿದ ಇಬ್ಬರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಸೋಮವಾರ ಬಿಡುಗಡೆ ಮಾಡಿದೆ.

ಪೊಂಚ್: ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ (ಐಎಎಫ್) ವಾಹನಗಳ ಮೇಲೆ ದಾಳಿ ನಡೆಸಿದ ಇಬ್ಬರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಸೋಮವಾರ ಬಿಡುಗಡೆ ಮಾಡಿದೆ. ಉಗ್ರರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾದರೆ, ಮತ್ತಿತರ ನಾಲ್ವರು ಗಾಯಗೊಂಡಿದ್ದರು. ಇಬ್ಬರು ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನೂ ಸೇನೆ ಘೋಷಿಸಿದೆ.

ದಾಳಿಯಲ್ಲಿ ಐವರು ಐಎಎಫ್ ಯೋಧರಿಗೆ ಗಾಯಗಳಾಗಿವೆ. ನಂತರ, ಅವರಲ್ಲಿ ಒಬ್ಬರಾದ ಕಾರ್ಪೋರಲ್ ವಿಕ್ಕಿ ಪಹಡೆ ಎಂಬವರು ಉಧಮ್‌ಪುರದ ಸೇನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಪೂಂಚ್‌ನ ದನ್ನಾ ಟಾಪ್, ಶಹಸ್ತಾರ್, ಶೀಂದ್ರಾ ಮತ್ತು ಸನೈ ಟಾಪ್ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಸುಮಾರು 20 ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಒಸಿ 16 ಕಾರ್ಪ್ಸ್ ಮತ್ತು ಜಮ್ಮು ಎಡಿಜಿಪಿ ಸೇರಿದಂತೆ ಪೊಲೀಸ್ ಮತ್ತು ಸೇನೆಯ ಉನ್ನತ ಅಧಿಕಾರಿಗಳು ನಿನ್ನೆ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಸುರನ್‌ಕೋಟೆ ಪ್ರದೇಶದ ಶೈಸ್ತರ್‌ ಸನಾಯ್‌ ಬಳಿ ಐಎಎಫ್‌ ಬೆಂಗಾವಲು ಪಡೆಯ ಮೇಲೆ ಶನಿವಾರ ಮೂವರು ಉಗ್ರರ ಗುಂಪು ಹಠಾತ್‌ ದಾಳಿ ನಡೆಸಿದ್ದವು. ಉಗ್ರರ ಪತ್ತೆಗೆ ನೆರವಾಗುವ ವಿಶ್ವಾಸಾರ್ಹ ಮಾಹಿತಿಯನ್ನು ನೀಡುವವರಿಗೆ ಬಹುಮಾನ ನೀಡಲಾಗುವುದು ಮತ್ತು ಅವರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT