ಸಾಂದರ್ಭಿಕ ಚಿತ್ರ 
ದೇಶ

ಐವರು ಡಿಐಜಿಗಳನ್ನು ಸಿಬಿಐ ಜಂಟಿ ನಿರ್ದೇಶಕರಾಗಿ ನೇಮಕ ಮಾಡಿದ ಕೇಂದ್ರ

ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್(ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್(ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಿ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ.

ಮಹಾರಾಷ್ಟ್ರ ಕೇಡರ್‌ನ 2005 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ, ಪ್ರಸ್ತುತ DIG ಆಗಿ ಕಾರ್ಯನಿರ್ವಹಿಸುತ್ತಿರುವ ಎಸ್ ವೀರೇಶ್ ಪ್ರಭು ಅವರನ್ನು ಸಿಬಿಐ ಜಂಟಿ ನಿರ್ದೇಶಕರಾಗಿ ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ(ACC) ಅನುಮೋದನೆ ನೀಡಿದೆ.

ವೀರೇಶ್ ಪ್ರಭು ಅವರ ಬ್ಯಾಚ್‌ಮೇಟ್ ರಾಜೀವ್ ರಂಜನ್(ಸಿಕ್ಕಿಂ ಕೇಡರ್) ಅವರನ್ನು ಮೇ 30, 2026 ರವರೆಗಿನ ಅವಧಿಗೆ ಪ್ರಧಾನ ತನಿಖಾ ಸಂಸ್ಥೆಯಲ್ಲಿ ಜಂಟಿ ನಿರ್ದೇಶಕರಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2005 ರ ಬ್ಯಾಚ್‌ನ ಇತರ ಮೂವರು ಐಪಿಎಸ್ ಅಧಿಕಾರಿಗಳಾದ ಸುಮೇಧಾ ದ್ವೆವೇದಿ(ಹಿಮಾಚಲ ಪ್ರದೇಶ ಕೇಡರ್), ವಿಜಯೇಂದ್ರ ಬಿದರಿ(ತಮಿಳುನಾಡು ಕೇಡರ್) ಮತ್ತು ಶಾರದ ರಾವುತ್(ಮಹಾರಾಷ್ಟ್ರ ಕೇಡರ್) ಅವರನ್ನೂ ಸಿಬಿಐ ಜಂಟಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT