ಫಾರೂಕ್ ಅಬ್ದುಲ್ಲಾ-ರಾಜನಾಥ್ ಸಿಂಗ್ 
ದೇಶ

ತಾಕತ್ತಿದ್ದರೆ POK ವಾಪಸ್ ಪಡೆಯಲಿ, ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ.. ಅವರ ಬಳಿಯೂ ಅಣು ಬಾಂಬ್ ಇದೆ: ರಾಜನಾಥ್ ಸಿಂಗ್ ಗೆ Farooq Abdullah ಸವಾಲು!

ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತದ ಪಾಲಾಗುತ್ತದೆ ಎಂದು ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಟಾಂಗ್ ನೀಡಿದ್ದು, ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ವಾಪಸ್ ಪಡೆಯಲಿದೆ ಎಂಬ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, 'ತಾಕತ್ತಿದ್ದರೆ POK ವಾಪಸ್ ಪಡೆಯಲಿ, ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ.. ಅವರ ಬಳಿಯೂ ಅಣು ಬಾಂಬ್ ಇದೆ' ಎಂದು ಕಿಡಿಕಾರಿದ್ದಾರೆ.

ಸುದ್ದಿಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ್ದ ರಾಜನಾಥ್ ಸಿಂಗ್, ಪಿಒಕೆಯನ್ನು ಭಾರತ ಬಲಪೂರ್ವಕವಾಗಿ ವಶಪಡಿಸಿಕೊಳ್ಳುವ ಅಗತ್ಯ ಇಲ್ಲ. ಅಲ್ಲಿನ ಜನರೇ ಭಾರತದ ಜೊತೆ ವಿಲೀನ ಮಾಡುತ್ತಾರೆ. ಪಾಕ್ ಆಕ್ರಮಿತ ಕಾಶ್ಮೀರದ ಭಾಗದ ಮೇಲಿನ ಹಕ್ಕನ್ನು ಭಾರತ ಎಂದಿಗೂ ಬಿಡುವುದಿಲ್ಲ. ಆದರೆ, ಆ ಭಾಗವನ್ನು ಭಾರತ ಬಲವಂತವಾಗಿ ವಶಪಡಿಸಿಕೊಳ್ಳುವ ಅವಶ್ಯಕತೆ ಇಲ್ಲ.

ಯಾಕೆಂದರೆ ಭಾರತದ ಭಾಗದಲ್ಲಿರುವ ಜಮ್ಮು ಕಾಶ್ಮೀರದಲ್ಲಿ ಆಗುತ್ತಿರುವ ಅಭಿವೃದ್ಧಿ ಕಂಡು ಜನರೇ ಪಿಒಕೆಯನ್ನು ಪಾಕಿಸ್ತಾನದಿಂದ ಮುಕ್ತಗೊಳಿಸುತ್ತಾರೆ ಎಂದು ಹೇಳಿದ್ದರು. ಅಂತೆಯೇ ‘ಪಿಒಕೆ ಅಂದಿಗೂ, ಇಂದಿಗೂ, ಎಂದಿಗೂ ಭಾರತದ ಭಾಗವಾಗಿಯೇ ಇದೆ. ಪಿಒಕೆ ಪಡೆಯಲು ನಾವು ಬಲಪ್ರಯೋಗ ಮಾಡುವುದಿಲ್ಲ. ಪಿಒಕೆ ಭಾರತದ ಜೊತೆ ವಿಲೀನ ಆಗಬೇಕೆಂದು ಜನರೇ ಹೇಳುತ್ತಿದ್ದಾರೆ. ಅಂತಹ ಬೇಡಿಕೆಗಳು ಈಗ ಬರತೊಡಗಿವೆ,’ ಎಂದು ಹೇಳಿದ್ದರು.

ಫಾರೂಕ್ ಅಬ್ದುಲ್ಲಾ ಆಕ್ರೋಶ

ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತದ ಪಾಲಾಗುತ್ತದೆ ಎಂದು ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಟಾಂಗ್ ನೀಡಿದ್ದು, 'ಪಿಒಕೆಯನ್ನು ಭಾರತ ಆಕ್ರಮಿಸುವಾಗ ಪಾಕಿಸ್ತಾನ ಕೈಗೆ ಬಳೆ ತೊಟ್ಟಿರುವುದಿಲ್ಲ. ಅವರ ಬಳಿ ಅಣು ಬಾಂಬ್​ಗಳಿವೆ. ರಾಜನಾಥ್ ಸಿಂಗ್​ಗೆ ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಅಂತೆಯೇ ‘ರಕ್ಷಣಾ ಸಚಿವರು ಹೀಗೆ ಹೇಳುತ್ತಿದ್ದಾರೆಂದರೆ, ಮಾಡಿ ತೋರಿಸಲಿ. ನಾವ್ಯಾಕೆ ಅವರನ್ನು ತಡೆಯೋಣ. ಆದರೆ, ಪಾಕಿಸ್ತಾನೀಯರು ಕೈಗೆ ಬಳೆ ತೊಟ್ಟಿಕೊಂಡು ಇರುವುದಿಲ್ಲ. ಆ ದೇಶದಲ್ಲಿ ಅಟಂ ಬಾಂಬ್​ಗಳಿವೆ ಎಂಬುದು ಗೊತ್ತಿರಲಿ. ದುರದೃಷ್ಟ ಎಂದರೆ ಆ ಅಣು ಬಾಂಬ್ ಗಳು ನಮ್ಮ ಮೇಲೆಯೇ ಬೀಳುತ್ತದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT