ಫಾರೂಕ್ ಅಬ್ದುಲ್ಲಾ-ರಾಜನಾಥ್ ಸಿಂಗ್ 
ದೇಶ

ತಾಕತ್ತಿದ್ದರೆ POK ವಾಪಸ್ ಪಡೆಯಲಿ, ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ.. ಅವರ ಬಳಿಯೂ ಅಣು ಬಾಂಬ್ ಇದೆ: ರಾಜನಾಥ್ ಸಿಂಗ್ ಗೆ Farooq Abdullah ಸವಾಲು!

ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತದ ಪಾಲಾಗುತ್ತದೆ ಎಂದು ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಟಾಂಗ್ ನೀಡಿದ್ದು, ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ವಾಪಸ್ ಪಡೆಯಲಿದೆ ಎಂಬ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, 'ತಾಕತ್ತಿದ್ದರೆ POK ವಾಪಸ್ ಪಡೆಯಲಿ, ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ.. ಅವರ ಬಳಿಯೂ ಅಣು ಬಾಂಬ್ ಇದೆ' ಎಂದು ಕಿಡಿಕಾರಿದ್ದಾರೆ.

ಸುದ್ದಿಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ್ದ ರಾಜನಾಥ್ ಸಿಂಗ್, ಪಿಒಕೆಯನ್ನು ಭಾರತ ಬಲಪೂರ್ವಕವಾಗಿ ವಶಪಡಿಸಿಕೊಳ್ಳುವ ಅಗತ್ಯ ಇಲ್ಲ. ಅಲ್ಲಿನ ಜನರೇ ಭಾರತದ ಜೊತೆ ವಿಲೀನ ಮಾಡುತ್ತಾರೆ. ಪಾಕ್ ಆಕ್ರಮಿತ ಕಾಶ್ಮೀರದ ಭಾಗದ ಮೇಲಿನ ಹಕ್ಕನ್ನು ಭಾರತ ಎಂದಿಗೂ ಬಿಡುವುದಿಲ್ಲ. ಆದರೆ, ಆ ಭಾಗವನ್ನು ಭಾರತ ಬಲವಂತವಾಗಿ ವಶಪಡಿಸಿಕೊಳ್ಳುವ ಅವಶ್ಯಕತೆ ಇಲ್ಲ.

ಯಾಕೆಂದರೆ ಭಾರತದ ಭಾಗದಲ್ಲಿರುವ ಜಮ್ಮು ಕಾಶ್ಮೀರದಲ್ಲಿ ಆಗುತ್ತಿರುವ ಅಭಿವೃದ್ಧಿ ಕಂಡು ಜನರೇ ಪಿಒಕೆಯನ್ನು ಪಾಕಿಸ್ತಾನದಿಂದ ಮುಕ್ತಗೊಳಿಸುತ್ತಾರೆ ಎಂದು ಹೇಳಿದ್ದರು. ಅಂತೆಯೇ ‘ಪಿಒಕೆ ಅಂದಿಗೂ, ಇಂದಿಗೂ, ಎಂದಿಗೂ ಭಾರತದ ಭಾಗವಾಗಿಯೇ ಇದೆ. ಪಿಒಕೆ ಪಡೆಯಲು ನಾವು ಬಲಪ್ರಯೋಗ ಮಾಡುವುದಿಲ್ಲ. ಪಿಒಕೆ ಭಾರತದ ಜೊತೆ ವಿಲೀನ ಆಗಬೇಕೆಂದು ಜನರೇ ಹೇಳುತ್ತಿದ್ದಾರೆ. ಅಂತಹ ಬೇಡಿಕೆಗಳು ಈಗ ಬರತೊಡಗಿವೆ,’ ಎಂದು ಹೇಳಿದ್ದರು.

ಫಾರೂಕ್ ಅಬ್ದುಲ್ಲಾ ಆಕ್ರೋಶ

ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತದ ಪಾಲಾಗುತ್ತದೆ ಎಂದು ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಟಾಂಗ್ ನೀಡಿದ್ದು, 'ಪಿಒಕೆಯನ್ನು ಭಾರತ ಆಕ್ರಮಿಸುವಾಗ ಪಾಕಿಸ್ತಾನ ಕೈಗೆ ಬಳೆ ತೊಟ್ಟಿರುವುದಿಲ್ಲ. ಅವರ ಬಳಿ ಅಣು ಬಾಂಬ್​ಗಳಿವೆ. ರಾಜನಾಥ್ ಸಿಂಗ್​ಗೆ ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಅಂತೆಯೇ ‘ರಕ್ಷಣಾ ಸಚಿವರು ಹೀಗೆ ಹೇಳುತ್ತಿದ್ದಾರೆಂದರೆ, ಮಾಡಿ ತೋರಿಸಲಿ. ನಾವ್ಯಾಕೆ ಅವರನ್ನು ತಡೆಯೋಣ. ಆದರೆ, ಪಾಕಿಸ್ತಾನೀಯರು ಕೈಗೆ ಬಳೆ ತೊಟ್ಟಿಕೊಂಡು ಇರುವುದಿಲ್ಲ. ಆ ದೇಶದಲ್ಲಿ ಅಟಂ ಬಾಂಬ್​ಗಳಿವೆ ಎಂಬುದು ಗೊತ್ತಿರಲಿ. ದುರದೃಷ್ಟ ಎಂದರೆ ಆ ಅಣು ಬಾಂಬ್ ಗಳು ನಮ್ಮ ಮೇಲೆಯೇ ಬೀಳುತ್ತದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT