ಅನಿಮೇಟೆಡ್ ಕಾರ್ಟೂನ್ 
ದೇಶ

ಮುಸ್ಲಿಂ ಮೀಸಲಾತಿ ಕುರಿತ ಬಿಜೆಪಿಯ ಅನಿಮೇಟೆಡ್ ವಿಡಿಯೋ 'ತಕ್ಷಣ' ತೆಗೆದುಹಾಕಿ: X ಗೆ ಚುನಾವಣಾ ಆಯೋಗ ಆದೇಶ

ಬಿಜೆಪಿ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ಗೆ ನಿರ್ದೇಶನ ನೀಡಿದೆ.

ನವದೆಹಲಿ: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ಗೆ ನಿರ್ದೇಶನ ನೀಡಿದೆ.

ಈ ಸಂಬಂಧ 'X' ನ ನೋಡಲ್ ಅಧಿಕಾರಿಗೆ ಬರೆದ ಪತ್ರದಲ್ಲಿ, ಕರ್ನಾಟಕ ಬಿಜೆಪಿ ಘಟಕ ಮಾಡಿರುವ ಪೋಸ್ಟ್ ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟನ್ನು ಉಲ್ಲಂಘಿಸುತ್ತದೆ. ಆದ್ದರಿಂದ ಈ ಪೋಸ್ಟ್ ಅನ್ನು ತಕ್ಷಣ ತೆಗೆದುಹಾಕುವಂತೆ ಚುನಾವಣಾ ಆಯೋಗ, ಎಕ್ಸ್ ಗೆ ನಿರ್ದೇಶನ ನೀಡಿದೆ.

ಪತ್ರದ ಜೊತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಈಗಾಗಲೇ ದಾಖಲಾಗಿರುವ ಎಫ್ಐಆರ್ ಪ್ರತಿಯನ್ನು ಸಹ ಚುನಾವಣಾ ಆಯೋಗ ಲಗತ್ತಿಸಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಈ ಸಂಬಂಧ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐಟಿ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ಪ್ರಕಾರ ಆಕ್ಷೇಪಾರ್ಹ ಪೋಸ್ಟ್ ಅನ್ನು ತೆಗೆದುಹಾಕಲು ಮೇ 5 ರಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು 'ಎಕ್ಸ್' ಗೆ ನಿರ್ದೇಶನ ನೀಡಿದ್ದಾರೆ. ಆದಾಗ್ಯೂ ಆ ಪೋಸ್ಟ್ ಅನ್ನು ಇನ್ನೂ ತೆಗೆದು ಹಾಕಿಲ್ಲ. ಆ ಪೋಸ್ಟ್ ಅನ್ನು ತಕ್ಷಣವೇ ತೆಗೆದುಹಾಕಲು ನಿರ್ದೇಶಿಸಲಾಗಿದೆ" ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಕರ್ನಾಟಕದ ಉಳಿದ 14 ಲೋಕಸಭಾ ಸ್ಥಾನಗಳಲ್ಲಿ ಮತದಾನ ನಡೆಯುತ್ತಿರುವ ದಿನವೇ 'X' ಗೆ ಚುನಾವಣಾ ಆಯೋಗ ಈಗ ಹೊಸ ನಿರ್ದೇಶನ ನೀಡಿದೆ.

ಬಿಜೆಪಿಯು ಮುಸ್ಲಿಂ ಮತ್ತು ಎಸ್‌ಸಿ/ಎಸ್‌ಟಿ ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್, ಅನಿಮೇಟೆಡ್ ಕಾರ್ಟೂನ್ ವಿಡಿಯೋ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT