ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆ; ಮೇ 20 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆಯಾಗಿದ್ದು, ಮೇ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆಯಾಗಿದ್ದು, ಮೇ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ.

ದೆಹಲಿ ಕೋರ್ಟ್ ನ ದ್ವಿ ಸದಸ್ಯ ನ್ಯಾಯಪೀಠದಲ್ಲಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪೀಠ ಮೇ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿತು.

ಪಿತೂರಿ ಆರೋಪ

ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು, 'ಇಡಿ ಸಂಗ್ರಹಿಸಿದ ವಿಷಯವು ಅರವಿಂದ್ ಕೇಜ್ರಿವಾಲ್ ಇತರರೊಂದಿಗೆ ಪಿತೂರಿ ನಡೆಸಿರುವುದನ್ನು ಬಹಿರಂಗಪಡಿಸುತ್ತದೆ. ಗೋವಾ ಚುನಾವಣೆಯಲ್ಲಿ ಹವಾಲಾ ಹಣ ಬಳಕೆಯಾಗಿದೆ ಎಂಬುದಕ್ಕೆ ಜಾರಿ ನಿರ್ದೇಶನಾಲಯ ಸಾಕ್ಷ್ಯಾಧಾರಗಳನ್ನು ನೀಡಿದೆ. ಹೀಗಾಗಿ ಕೇಜ್ರಿವಾಲ್ ಬಂಧನ ಕಾನೂನಿಗೆ ವಿರುದ್ಧವಾಗಿಲ್ಲ, ರಿಮಾಂಡ್ ಅನ್ನು ಅಕ್ರಮ ಎಂದು ಕರೆಯಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.

ಕೇಜ್ರಿವಾಲ್ ಪ್ರಕರಣದ ಕಿಂಗ್ ಪಿನ್ ಎಂದಿರುವ ED

ಇನ್ನು ಅಬಕಾರಿ ನೀತಿ ಹಗರಣದಲ್ಲಿ ಕೆಲ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಡಲು ಅರವಿಂದ್ ಕೇಜ್ರಿವಾಲ್ ರದ್ದಾಗಿದ್ದ ಕಾನೂನಿಗೆ ತಿದ್ದುಪಡಿ ತಂದಿದ್ದರು. ಆ ಮೂಲಕ ಕಿಕ್ ಬ್ಯಾಕ್ ಪಡೆದಿದ್ದರು. ಹೀಗಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದೇ ಕೇಜ್ರಿವಾಲ್ ಈ ಪ್ರಕರಣದ ಕಿಂಗ್ ಪಿನ್ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!