ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆ; ಮೇ 20 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆಯಾಗಿದ್ದು, ಮೇ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆಯಾಗಿದ್ದು, ಮೇ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ.

ದೆಹಲಿ ಕೋರ್ಟ್ ನ ದ್ವಿ ಸದಸ್ಯ ನ್ಯಾಯಪೀಠದಲ್ಲಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪೀಠ ಮೇ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿತು.

ಪಿತೂರಿ ಆರೋಪ

ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು, 'ಇಡಿ ಸಂಗ್ರಹಿಸಿದ ವಿಷಯವು ಅರವಿಂದ್ ಕೇಜ್ರಿವಾಲ್ ಇತರರೊಂದಿಗೆ ಪಿತೂರಿ ನಡೆಸಿರುವುದನ್ನು ಬಹಿರಂಗಪಡಿಸುತ್ತದೆ. ಗೋವಾ ಚುನಾವಣೆಯಲ್ಲಿ ಹವಾಲಾ ಹಣ ಬಳಕೆಯಾಗಿದೆ ಎಂಬುದಕ್ಕೆ ಜಾರಿ ನಿರ್ದೇಶನಾಲಯ ಸಾಕ್ಷ್ಯಾಧಾರಗಳನ್ನು ನೀಡಿದೆ. ಹೀಗಾಗಿ ಕೇಜ್ರಿವಾಲ್ ಬಂಧನ ಕಾನೂನಿಗೆ ವಿರುದ್ಧವಾಗಿಲ್ಲ, ರಿಮಾಂಡ್ ಅನ್ನು ಅಕ್ರಮ ಎಂದು ಕರೆಯಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.

ಕೇಜ್ರಿವಾಲ್ ಪ್ರಕರಣದ ಕಿಂಗ್ ಪಿನ್ ಎಂದಿರುವ ED

ಇನ್ನು ಅಬಕಾರಿ ನೀತಿ ಹಗರಣದಲ್ಲಿ ಕೆಲ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಡಲು ಅರವಿಂದ್ ಕೇಜ್ರಿವಾಲ್ ರದ್ದಾಗಿದ್ದ ಕಾನೂನಿಗೆ ತಿದ್ದುಪಡಿ ತಂದಿದ್ದರು. ಆ ಮೂಲಕ ಕಿಕ್ ಬ್ಯಾಕ್ ಪಡೆದಿದ್ದರು. ಹೀಗಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದೇ ಕೇಜ್ರಿವಾಲ್ ಈ ಪ್ರಕರಣದ ಕಿಂಗ್ ಪಿನ್ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT