ಕೆ ಕವಿತಾ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ.

ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ.

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ, ಜಾರಿ ನಿರ್ದೇಶನಾಲಯವು ತನಿಖೆಯು ನಿರ್ಣಾಯಕ ಹಂತದಲ್ಲಿದೆ ಮತ್ತು ಕವಿತಾ ವಿರುದ್ಧ ಒಂದು ವಾರದೊಳಗೆ ಚಾರ್ಜ್ ಶೀಟ್ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿತು.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT