ಆಕಾಶ್ ಆನಂದ್ ಅವರೊಂದಿಗೆ ಮಾಯಾವತಿ 
ದೇಶ

ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್ ತೆಗೆದುಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್(28) ಅವರನ್ನು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದಾರೆ.

ಲಖನೌ: ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್(28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಮತ್ತು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದಾರೆ.

ಈ ಕುರಿತು ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಮಾಯಾವತಿ, "ಪಕ್ಷ ಮತ್ತು ಬಹುಜನ ಚಳುವಳಿಯ ಹಿತಾಸಕ್ತಿಯಿಂದ, ಪಕ್ಷದ ರಾಷ್ಟ್ರೀಯ ಸಂಯೋಜಕ ಮತ್ತು ನನ್ನ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದ ಆಕಾಶ್ ಆನಂದ್ ಅವರನ್ನು ಪೂರ್ಣ ಪ್ರಬುದ್ಧತೆ ಬರುವವರೆಗೆ ಎರಡೂ ನಿರ್ಣಾಯಕ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.

ಬಿಜೆಪಿಯನ್ನು ತಾಲಿಬಾನ್‌ಗೆ ಹೋಲಿಸಿದ ಕೆಲವು ದಿನಗಳ ನಂತರ 28 ವರ್ಷದ ಆಕಾಶ್ ಆನಂದ್ ಅವರನ್ನು ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಲಾಗಿದೆ. ಅಲ್ಲದೆ ಆಕಾಶ್​ ಇನ್ನೂ ಅಪ್ರಬುದ್ಧ ಎಂದು ಬಿಎಸ್​ಪಿ ನಾಯಕಿ ಹೇಳಿದ್ದಾರೆ.

ಬಿಎಸ್‌ಪಿ ಕೇವಲ ಒಂದು ಪಕ್ಷವಲ್ಲ, ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಸ್ವಾಭಿಮಾನ ಮತ್ತು ಸಾಮಾಜಿಕ ಬದಲಾವಣೆಯ ಚಳುವಳಿಯಾಗಿದೆ. ಇದಕ್ಕಾಗಿ ಕಾನ್ಶಿ ರಾಮ್ ಜಿ ಮತ್ತು ನಾನು ನಮ್ಮ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟೆವು. ಹೊಸ ಪೀಳಿಗೆಯು ಇದಕ್ಕೆ ವೇಗವನ್ನು ನೀಡಲು ಸಿದ್ಧವಾಗುತ್ತಿದೆ. ಆ ನಿಟ್ಟಿನಲ್ಲಿ ಪಕ್ಷದಲ್ಲಿ ಇತರರ ಜೊತೆಗೆ, ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕ ಮತ್ತು ನನ್ನ ಉತ್ತರಾಧಿಕಾರಿ ಎಂದು ಘೋಷಿಸಲಾಯಿತು. ಆದರೆ ಅವರು ಪಕ್ಷ ಮತ್ತು ಚಳುವಳಿಯ ಹಿತಾಸಕ್ತಿಯಿಂದ ಅವರು ಪೂರ್ಣ ಪ್ರಬುದ್ಧತೆಯನ್ನು ಪಡೆಯುವವರೆಗೆ ಈ ಎರಡು ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗುವುದಿಲ್ಲ ಎಂದು ಮಾಯಾವತಿ ಅವರು ಎಕ್ಸ್​ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಆದರೆ, ಆಕಾಶ್​ ತಂದೆ ಆನಂದ್ ಕುಮಾರ್ ಅವರು ಪಕ್ಷದಲ್ಲಿ ತಮ್ಮ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ತ್ಯಾಗ, ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಗುರಿಯನ್ನು ಮುನ್ನಡೆಸಲು ಬಿಎಸ್‌ಪಿ ನಾಯಕತ್ವ ಹಿಂದೆ ಸರಿಯುತ್ತಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT