ಮಮತಾ ಬ್ಯಾನರ್ಜಿ  
ದೇಶ

ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ 'ಮೋದಿ ನೀತಿ ಸಂಹಿತೆ'ಯಾಗಿ ಮಾರ್ಪಟ್ಟಿದೆ: ಮಮತಾ

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪುರುಲಿಯಾ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದ್ದು, ಮಾದರಿ ನೀತಿ ಸಂಹಿತೆಯನ್ನು ‘ಮೋದಿ ನೀತಿ ಸಂಹಿತೆ’ಯಾಗಿ ಪರಿವರ್ತಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ವರಿಷ್ಠೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮನ್ನು ಮಾತ್ರ ಹಿಂದೂಗಳು ಎಂದು ಪರಿಗಣಿಸುತ್ತಾರೆ ಮತ್ತು ಅವರು ಇತರ ಸಮುದಾಯಗಳ ಬಗ್ಗೆ ಯೋಚಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮ "ದ್ವೇಷ ತುಂಬಿದ ಭಾಷಣಗಳ" ಮೂಲಕ ಕೆಳ ಜಾತಿಯ ಹಿಂದೂಗಳು, ಅಲ್ಪಸಂಖ್ಯಾತರು ಮತ್ತು ಇತರ ವರ್ಗದ ಜನರನ್ನು ಬೆದರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮೌನವಾಗಿದೆ ಎಂದು ಮಮತಾ ಆರೋಪಿಸಿದ್ದಾರೆ.

"ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಅಣಕವಾಗಿದೆ ಮತ್ತು ಅದನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು. ಆದರೆ ಈ ದೇಶದ ನಾಗರಿಕರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ" ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಬ್ಯಾನರ್ಜಿ, ಇಷ್ಟೊಂದು ಸುಳ್ಳು ಹೇಳುವ ಮತ್ತೊಬ್ಬ ಪ್ರಧಾನಿಯನ್ನು ನಾನು ನೋಡಿಲ್ಲ ಎಂದಿದ್ದಾರೆ.

"ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ನೀಡುವುದಾಗಿ 2014 ರಲ್ಲಿ ನೀಡಿದ ಭರವಸೆ ಏನಾಯಿತು? ಉಚಿತ ಎಲ್‌ಪಿಜಿ ಗ್ಯಾಸ್ ನೀಡುವುದಾಗಿ ನೀಡಿದ ಭರವಸೆ ಏನಾಯಿತು? ಅವರ 'ಬೇಟಿ ಬಂಚಾವೋ ಬೇಟಿ ಪಡಾವೋ' ಯೋಜನೆ ಏನಾಯಿತು?" ಎಂದು ಪಶ್ಚಿಮ ಬಂಗಾಳ ಸಿಎಂ ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ