ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ online desk
ದೇಶ

ಜನಾಂಗೀಯ ಹೇಳಿಕೆಗೆ ಸ್ಯಾಮ್ ಪಿತ್ರೋಡಾ ವಿರುದ್ಧ ಕಾನೂನು ಕ್ರಮಕ್ಕೆ ಮಣಿಪುರ ಸಿಎಂ ಮುಂದು

ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಭಾರತದ ವಿವಿಧ ಭೌಗೋಳಿಕ ಪ್ರಾಂತ್ಯಗಳಲ್ಲಿರುವವರ ಮುಖ ಲಕ್ಷಣಗಳ ಬಗ್ಗೆ ಮಾತನಾಡಿದ್ದು ಈಗ ದೇಶಾದ್ಯಂತ ಚರ್ಚೆಯಾಗುತ್ತಿದೆ.

ಮಣಿಪುರ: ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಭಾರತದ ವಿವಿಧ ಭೌಗೋಳಿಕ ಪ್ರಾಂತ್ಯಗಳಲ್ಲಿರುವವರ ಮುಖ ಲಕ್ಷಣಗಳ ಬಗ್ಗೆ ಮಾತನಾಡಿದ್ದು ಈಗ ದೇಶಾದ್ಯಂತ ಚರ್ಚೆಯಾಗುತ್ತಿದೆ.

ಭಾರತದ ದಕ್ಷಿಣ ಪ್ರದೇಶದಲ್ಲಿರುವವರು ಆಫ್ರಿಕನ್ನರನ್ನು ಹೋಲುತ್ತಾರೆ, ಪಶ್ಚಿಮ ಪ್ರದೇಶದಲ್ಲಿರುವವರು ಮಧ್ಯಪ್ರಾಚ್ಯದ ಜನರನ್ನು ಹೋಲುತ್ತಾರೆ ಈಶಾನ್ಯ ರಾಜ್ಯದವರು ಚೀನಾ ಜನರಂತೆ ಕಾಣುತ್ತಾರೆ ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ಪಿತ್ರೋಡಾ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಣಿಪುರ ಸಿಎಂ ಬಿರೇನ್ ಸಿಂಗ್ ಕಾಂಗ್ರೆಸ್ ನಾಯಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಪಿತ್ರೋಡಾ ಹೇಗೆ ಈ ರೀತಿಯ ಜನಾಂಗೀಯ ಹೇಳಿಕೆ ನೀಡುವುದಕ್ಕೆ ಸಾಧ್ಯ? ಅವರು ನೀಡಿರುವ ಈ ಜನಾಂಗೀಯ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾನೂನು ತಜ್ಞರೊಂದಿಗೆ ಚರ್ಚಿಸಿ, ಪಿತ್ರೋಡಾ ವಿರುದ್ಧ ಕ್ರಮ ಜರುಗಿಸಲು ನಿರ್ಧರಿಸುತ್ತೇನೆ ಎಂದು ಬಿರೇನ್ ಸಿಂಗ್ ಹೇಳಿದ್ದಾರೆ.

"ಇದು ಅತ್ಯಂತ ಬೇಜವಾಬ್ದಾರಿ ಹೇಳಿಕೆಯಾಗಿದ್ದು ಅವರು ಭಾರತದ ಭೌಗೋಳಿಕ ಸಂಯೋಜನೆಯನ್ನು ತಿಳಿದಿಲ್ಲ. ಕಾಂಗ್ರೆಸ್ ಈ 'ಒಡೆದು ಆಳುವ' ನೀತಿಯನ್ನು ಮಾಡುತ್ತಿದೆ. ಈಶಾನ್ಯದ ಜನರನ್ನು ಚೀನಾದವರಂತೆ ಎಂದು ಅವರು ಹೇಗೆ ಹೇಳುತ್ತಾರೆ? ನಾವು ಭಾರತದ ಭಾಗವಾಗಿದ್ದೇವೆ. ನಾವು ಚೀನಾಕ್ಕೆ ಸೇರಿದವರಲ್ಲ, ನಾವು ಕೇವಲ ಭಾರತೀಯರು, ಎಲ್ಲಾ ಈಶಾನ್ಯ ಜನರು ಒಟ್ಟಿಗೆ ವಾಸಿಸುತ್ತಿದ್ದಾರೆ" ಎಂದು ಮಣಿಪುರ ಮುಖ್ಯಮಂತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT