ಪ್ರಿಯಾಂಕಾ ಗಾಂಧಿ ವಾದ್ರಾ  
ದೇಶ

ರಾಯ್ ಬರೇಲಿ ಜನತೆ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಜ್ಜಾಗಿದ್ದಾರೆ: ಪ್ರಿಯಾಂಕಾ ಗಾಂಧಿ

ರಾಯ್‌ಬರೇಲಿ: ರಾಯ್‌ಬರೇಲಿ ಜನರೊಂದಿಗಿನ ತಮ್ಮ ಪಕ್ಷದ 100 ವರ್ಷಗಳ ಹಳೆಯ ಸಂಬಂಧವು ಹೊಸ ಯುಗವನ್ನು ಪ್ರವೇಶಿಸಿದೆ. ಕ್ಷೇತ್ರದ ಜನರು ಮತ್ತೊಮ್ಮೆ ಕಾಂಗ್ರೆಸ್ ನಾಯಕತ್ವಕ್ಕೆ ಮಣೆ ಹಾಕಲಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಟುಂಬದ ಭದ್ರಕೋಟೆಯಾಗಿದ್ದ ರಾಯ್ ಬರೇಲಿಯಲ್ಲಿ ತಮ್ಮ ಸೋದರ ರಾಹುಲ್ ಗಾಂಧಿಯವರ ಪ್ರಚಾರಕ್ಕೆ ಪುಷ್ಟಿ ನೀಡಲು ಕ್ಷೇತ್ರಕ್ಕೆ ಆಗಮಿಸುತ್ತಿರುವ ಪ್ರಿಯಾಂಕಾ ಗಾಂಧಿ, ರಾಯ್ ಬರೇಲಿಯ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಜನರ ಉತ್ಸಾಹವನ್ನು ಕಂಡು ಖುಷಿಯಾಗುತ್ತಿದೆ ಎಂದರು.

ರಾಯ್ ಬರೇಲಿಯ ಜನರೊಂದಿಗೆ 100 ವರ್ಷಗಳ ಸೇವೆಯ ಕಾಂಗ್ರೆಸ್ ಸಂಬಂಧವು ಹೊಸ ಹಂತವನ್ನು ಈಗ ಪ್ರವೇಶಿಸಿದೆ. ರಾಯ್ ಬರೇಲಿ ಕುಟುಂಬವು ಮತ್ತೊಮ್ಮೆ ಕಾಂಗ್ರೆಸ್ ನಾಯಕತ್ವವನ್ನು ಸ್ವೀಕರಿಸಲು ಸಜ್ಜಾಗಿದೆ. ಇಂದು, ನಾನು ರಾಯ್ ಬರೇಲಿಯ ಬಚ್ರವಾನ್‌ನ ವಿವಿಧ ಪ್ರದೇಶಗಳಲ್ಲಿ ಬೀದಿ ಸಭೆಗಳ ಮೂಲಕ ನನ್ನ ಕುಟುಂಬ ಸದಸ್ಯರನ್ನು ಭೇಟಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.

ಚುನಾವಣಾ ಪ್ರಚಾರದ ಭಾಗವಾಗಿ, ಪ್ರಿಯಾಂಕಾ ಗಾಂಧಿ ಅವರು ತುಲ್ವಾಸಾ, ಮಹಾರಾಜ್‌ಗಂಜ್, ಹಾಲೋರ್, ಭವಾನಿಗಢ, ಗೂಢಾ, ತಿಲೆಂಡಾ, ಇಂಚೌಲಿ ಮತ್ತು ಸುದೌಲಿ --ಇವೆಲ್ಲವೂ ರಾಯ್ ಬರೇಲಿಯ ಬಚ್ರವಾನ್ ವಿಧಾನಸಭಾ ಕ್ಷೇತ್ರದ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

2019ರಲ್ಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕ್ಷೇತ್ರದಿಂದ ಗೆದ್ದಿದ್ದರು. ಬಿಜೆಪಿ ಈ ಬಾರಿ ಸಚಿವ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಕ್ಷೇತ್ರದಿಂದ ಕಣಕ್ಕಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT