ವೈಜಯಂತಿಮಾಲಾಗೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು 
ದೇಶ

ಹಿರಿಯ ನಟಿ ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ!

ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತಿತರ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ನವದೆಹಲಿ: ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತಿತರ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಸಮಾಚಾರ ಪತ್ರಿಕೆ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ, ಬಿಜೆಪಿ ನಾಯಕ ಓ ರಾಜಗೋಪಾಲ್, ಲಡಾಖ್‌ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ "ಕ್ಯಾಪ್ಟನ್" ವಿಜಯಕಾಂತ್ , ಗುಜರಾತಿ ಪತ್ರಿಕೆ "ಜನ್ಮಭೂಮಿ" ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

90 ವರ್ಷದ ವೈಜಯಂತಿ ಮಾಲಾ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿದರೆ, ಬೀವಿ, ಕಾಮ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬದ ಸದಸ್ಯರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.

ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. 2024 ರಲ್ಲಿ ಐದು ಪದ್ಮ ವಿಭೂಷ, 17 ಪದ್ಮ ಭೂಷಣ ಮತ್ತು 110 ಪದ್ಮ ಪ್ರಶಸ್ತಿ ಸೇರಿದಂತೆ ಒಟ್ಟಾರೇ 132 ಪ್ರಶಸ್ತಿಗಳನ್ನು ರಾಷ್ಟ್ರಪತಿ ಘೋಷಿಸಿದ್ದರು.

ಪ್ರಶಸ್ತಿ ಪುರಸ್ಕೃತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರಿಗೆ ಏಪ್ರಿಲ್ 22 ರಂದು ನೀಡಲಾಗಿತ್ತು. ಉಳಿದವರಿಗೆ ಗುರುವಾರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT