ಮೋದಿ-ಬೈಡನ್ online desk
ದೇಶ

ಭಾರತದ ಲೋಕಸಭಾ ಚುನಾವಣೆಯಲ್ಲಿ ಅಮೇರಿಕಾ ಹಸ್ತಕ್ಷೇಪ; ರಷ್ಯಾ ಗಂಭೀರ ಆರೋಪ

ಅಮೇರಿಕಾದಲ್ಲಿರುವ ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಯತ್ನದ ಆರೋಪದಲ್ಲಿ ಅಮೇರಿಕಾ ಭಾರತದ ವಿರುದ್ಧ ಸಮರ್ಪಕ ಸಾಕ್ಷ್ಯಾಧಾರಗಳನ್ನು ನೀಡಿಲ್ಲ ಎಂದಿರುವ ರಷ್ಯಾ ಭಾರತದ ಆಂತರಿಕ ವಿಷಯಗಳಲ್ಲಿ ಅಮೇರಿಕಾ ಹಸ್ತಕ್ಷೇಪ ಮಾಡುತ್ತಿದೆ ಎಂದು ಹೇಳಿದೆ.

ನವದೆಹಲಿ: ಅಮೇರಿಕಾದಲ್ಲಿರುವ ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಯತ್ನದ ಆರೋಪದಲ್ಲಿ ಅಮೇರಿಕಾ ಭಾರತದ ವಿರುದ್ಧ ಸಮರ್ಪಕ ಸಾಕ್ಷ್ಯಾಧಾರಗಳನ್ನು ನೀಡಿಲ್ಲ ಎಂದಿರುವ ರಷ್ಯಾ ಭಾರತದ ಆಂತರಿಕ ವಿಷಯಗಳಲ್ಲಿ ಅಮೇರಿಕಾ ಹಸ್ತಕ್ಷೇಪ ಮಾಡುತ್ತಿದೆ ಎಂದು ಹೇಳಿದೆ.

ಈಗ ಭಾರತದಲ್ಲಿ ನಡೆಯುತ್ತಿರುವ ಚುನಾವಣೆಗಳಲ್ಲಿಯೂ ಅಮೇರಿಕಾ ಹಸ್ತಕ್ಷೇಪ ಮಾಡುತ್ತಿದೆ ಎಂದು ರಷ್ಯಾ ಹೇಳಿದೆ. ಅಮೇರಿಕಾ ಭಾರತದ ರಾಷ್ಟ್ರೀಯ ಮನೋಧರ್ಮ ಹಾಗೂ ಇತಿಹಾಸವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಬದಲಾಗಿ ಅಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆಧಾರರಹಿತ ಆರೋಪಗಳನ್ನು ಹೊರಿಸುತ್ತಿದೆ.

"ನವದೆಹಲಿಯ ವಿರುದ್ಧ ಯುನೈಟೆಡ್ ಸ್ಟೇಟ್ಸ್ ಆಗಾಗ್ಗೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ. ಭಾರತವನ್ನು ಮಾತ್ರವಲ್ಲದೆ ಇತರ ಹಲವು ದೇಶಗಳು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿದೆ ಎಂದು ಆಧಾರರಹಿತವಾಗಿ ಆರೋಪಿಸುವುದನ್ನು ನಾವು ನೋಡುತ್ತೇವೆ. ಇದು ರಾಷ್ಟ್ರೀಯ ಮನಸ್ಥಿತಿಯ ಯುನೈಟೆಡ್ ಸ್ಟೇಟ್ಸ್ ನ ತಪ್ಪು ತಿಳುವಳಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಷ್ಯಾ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.

ಅಮೇರಿಕಾ ಭಾರತದ 2024 ರ ಲೋಕಸಭಾ ಚುನಾವಣೆ ಜಟಿಲಗೊಳಿಸುತ್ತಿದೆ. ಈಗ ನಡೆಯುತ್ತಿರುವ ಸಾರ್ವತ್ರಿಕ ಸಂಸತ್ತಿನ ಚುನಾವಣೆಗಳನ್ನು ಸಂಕೀರ್ಣಗೊಳಿಸುವ ಸಲುವಾಗಿ ಅಮೇರಿಕಾ ಭಾರತದ ಆಂತರಿಕ ರಾಜಕೀಯ ಪರಿಸ್ಥಿತಿಯನ್ನು ಅಸಮತೋಲನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ರಷ್ಯಾ ವಿದೇಶಾಂಗ ಇಲಾಖೆ ವಕ್ತಾರರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT