ಅಮಿತ್ ಶಾ online desk
ದೇಶ

ಮುಸ್ಲಿಂ ಮೀಸಲಾತಿ ತೆಗೆದು ಅದನ್ನು SC/ST ಗಳಿಗೆ ನೀಡುತ್ತೇವೆ: ಗೃಹ ಸಚಿವ ಅಮಿತ್ ಶಾ

ಲೋಕಸಭಾ ಚುನಾವಣೆ 2024 ಗೆ 4 ನೇ ಹಂತದ ಮತದಾನ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮತ್ತೆ ಮೀಸಲಾತಿ ಚರ್ಚೆ ಮುನ್ನೆಲೆಗೆ ಬಂದಿದೆ.

ತೆಲಂಗಾಣ: ಲೋಕಸಭಾ ಚುನಾವಣೆ 2024 ಗೆ 4 ನೇ ಹಂತದ ಮತದಾನ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮತ್ತೆ ಮೀಸಲಾತಿ ಚರ್ಚೆ ಮುನ್ನೆಲೆಗೆ ಬಂದಿದೆ. ಗೃಹ ಸಚಿವ ಅಮಿತ್ ಶಾ ತೆಲಂಗಾಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ, ಎಸ್ ಸಿ/ಎಸ್ ಟಿಗಳ ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸುಳ್ಳುಗಳನ್ನು ಹೇಳುವ ಮೂಲಕ ಚುನಾವಣೆ ಎದುರಿಸಲು ಯತ್ನಿಸುತ್ತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಮೀಸಲಾತಿಯನ್ನೇ ರದ್ದುಗೊಳಿಸುತ್ತಾರೆಂದು ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ.

ಪ್ರಧಾನಿ ಮೋದಿ 10 ವರ್ಷಗಳಿಂದ ಸರ್ವಾನುಮತ ಪಡೆದು ಆಡಳಿತ ನಡೆಸುತ್ತಿದ್ದಾರೆ. ಆದರೆ ಅವರೆಂದೂ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಎಸ್ ಸಿ/ ಎಸ್ ಟಿ ಹಾಗೂ ಒಬಿಸಿಗಳ ಮೀಸಲಾತಿಯನ್ನು ಕಸಿದುಕೊಂಡಿದೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

2019 ರಲ್ಲಿ ತೆಲಂಗಾಣದ ಜನತೆ ನಮಗೆ 4 ಸ್ಥಾನಗಳನ್ನು ನೀಡಿದ್ದರು ಈ ಬಾರಿ 10 ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುತ್ತೇವೆ. ತೆಲಂಗಾಣ ಪ್ರಧಾನಿ ಮೋದಿ 400 ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಕ್ಕೆ ಸಹಕಾರಿಯಾಗಲಿದೆ. 10 ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ನೀಡಿ, ನಾವು ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಎಸ್ ಸಿ/ ಎಸ್ ಟಿ ಹಾಗೂ ಒಬಿಸಿ ಮೀಸಲಾತಿಯನ್ನು ಏರಿಕೆ ಮಾಡುತ್ತೆವೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT