ಮಲ್ಲಿಕಾರ್ಜುನ ಖರ್ಗೆ 
ದೇಶ

ಅರಾಜಕತೆ ಸೃಷ್ಟಿಸುವ ಯತ್ನ: ಮತದಾನ ಪ್ರಮಾಣದ ಬಗ್ಗೆ ಖರ್ಗೆ ಹೇಳಿಕೆಗೆ ಚುನಾವಣಾ ಆಯೋಗ ತರಾಟೆ!

ಲೋಕಸಭಾ ಚುನಾವಣೆ2024 ರ ಮತದಾನಕ್ಕೆ ಅಡ್ಡಿ ಪಡಿಸುವಂತಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಚುನಾವಣಾ ಆಯೋಗ ತರಾಟೆಗೆ ತೆಗೆದುಕೊಂಡಿದೆ.

ನವದೆಹಲಿ: ಲೋಕಸಭಾ ಚುನಾವಣೆ2024 ರ ಮತದಾನಕ್ಕೆ ಅಡ್ಡಿ ಪಡಿಸುವಂತಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಚುನಾವಣಾ ಆಯೋಗ ತರಾಟೆಗೆ ತೆಗೆದುಕೊಂಡಿದೆ.

ಮತದಾನ ಪ್ರಮಾಣದ ಅಂಕಿ-ಅಂಶಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಚುನಾವಣೆ ಪ್ರಕ್ರಿಯೆ ಮಧ್ಯದಲ್ಲಿ ಆಧಾರ ರಹಿತ ಹೇಳಿಕೆ ನೀಡಿದ್ದಾರೆ. ಈ ರೀತಿಯ ಹೇಳಿಕೆಗಳು ಗೊಂದಲ, ಮುಕ್ತ ಮತ್ತು ನ್ಯಾಯಸಮ್ಮತವಾದ ಮತದಾನವನ್ನು ನಡೆಸುವಲ್ಲಿ ತಪ್ಪು ನಿರ್ದೇಶನ ಮತ್ತು ಅಡೆತಡೆಗಳನ್ನು ಉಂಟುಮಾಡಲಿವೆ ಎಂದು ಆಯೋಗ ಹೇಳಿದೆ.

ಇಂತಹ ಹೇಳಿಕೆಗಳು ಮತದಾರರ ಭಾಗವಹಿಸುವಿಕೆಯ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು ಮತ್ತು ರಾಜ್ಯಗಳಾದ್ಯಂತ ದೊಡ್ಡ ಚುನಾವಣಾ ವ್ಯವಸ್ಥೆಗಳನ್ನು ನಿರಾಶೆಗೊಳಿಸಬಹುದು ಎಂದು ಆಯೋಗ ಹೇಳಿದೆ.

ಖರ್ಗೆ ಹೇಳಿಕೆಗೆ ತೀಕ್ಷ್ಣ ಎಚ್ಚರಿಕೆ ನೀಡಿರುವ ಆಯೋಗ, ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಗಳು ನೇರ ಚುನಾವಣಾ ಕಾರ್ಯಾಚರಣೆಗಳ ಪ್ರಾಮುಖ್ಯತೆ ಮೇಲೆ ಆಕ್ರಮಣಶೀಲತೆಯಾಗಿದೆ, ಖರ್ಗೆ ಹಾಗೂ ಇತರ INDI ಮೈತ್ರಿಕೂಟದ ನಾಯಕರು ಮತದಾನದ ಪ್ರಮಾಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಆಯೋಗ ಗಮನಿಸಿದ್ದು, ಇಂತಹ ಹೇಳಿಕೆಗಳು ಅನಪೇಕ್ಷಿತವಾಗಿದೆ ಈ ರೀತಿಯ ಹೇಳಿಕೆಗಳು ಅನುಮಾನಗಳು ಮತ್ತು ಅಸಂಗತತೆಯ ಜೊತೆಗೆ ಅರಾಜಕ ಪರಿಸ್ಥಿತಿಯನ್ನು, ಪಕ್ಷಪಾತದ ನಿರೂಪಣೆಯನ್ನು ಸೃಷ್ಟಿಸಬಹುದು ಎಂದು ಆಯೋಗ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ