ಜಿಲೇಬಿ ಬಾಬಾ ಸಾವು 
ದೇಶ

120ಕ್ಕೂ ಹೆಚ್ಚು ಮಹಿಳೆಯರ Rape ಮಾಡಿ ಸಿಡಿ ಮಾಡಿದ್ದ ಜಿಲೇಬಿ ಬಾಬಾ ಜೈಲಲ್ಲೇ ಸಾವು!

120ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಮಾಡಿ ವಿಡಿಯೋ ಸಿಡಿ ಮಾಡಿದ್ದ ಆರೋಪದ ಮೇರೆಗೆ ಜೈಲು ಶಿಕ್ಷೆಗೆ ಗುರಿಯಾಗಿದ್ದ ಹರ್ಯಾಣದ ಸ್ವಯಂ ಘೋಷಿತ ದೇವಮಾನವ ಜಿಲೇಬಿ ಬಾಬಾ ಜೈಲಿನಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಚಂಡೀಘಡ: 120ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಮಾಡಿ ವಿಡಿಯೋ ಸಿಡಿ ಮಾಡಿದ್ದ ಆರೋಪದ ಮೇರೆಗೆ ಜೈಲು ಶಿಕ್ಷೆಗೆ ಗುರಿಯಾಗಿದ್ದ ಹರ್ಯಾಣದ ಸ್ವಯಂ ಘೋಷಿತ ದೇವಮಾನವ ಜಿಲೇಬಿ ಬಾಬಾ ಜೈಲಿನಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಓರ್ವ ಅಪ್ರಾಪ್ತೆಯೂ ಸೇರಿದಂತೆ ತನ್ನ ಮೂವರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರವೆಸಗಿದ್ದ ಆರೋಪ ಈತನ ಮೇಲಿತ್ತು. ಈ ಪ್ರಕರಣದಲ್ಲಿ ಈತ ದೋಷಿ ಎಂದು ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಈತನಿಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಈತನನ್ನು ಹರ್ಯಾಣದ ಹಿಸ್ಸಾರ್ ಜೈಲಿನಲ್ಲಿರಿಸಲಾಗಿತ್ತು. ಆದರೆ ಈಗ ಆತ ಜೈಲಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೂಲಗಳ ಪ್ರಕಾರ ಜಿಲೇಬಿ ಬಾಬಾ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಅನಾರೋಗ್ಯದಿಂದ ಆತನಿಗೆ ಹೃದಯಾಘಾತವಾಗಿದೆ ಎಂದು ಆತನ ಪರ ವಕೀಲ ಗಜೇಂದ್ರ ಪಾಂಡೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತನನ್ನು ಮಂಗಳವಾರ ರಾತ್ರಿಯೇ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಹರ್ಯಾಣದ ಫತೇಹಬಾದ್ ಜಿಲ್ಲೆಯಲ್ಲಿ ತಳ್ಳುಗಾಡಿಯಲ್ಲಿ ಜಿಲೇಬಿ ಮಾರಾಟ ಮಾಡುತ್ತಿದ್ದ, ಬಾಬಾ ಬಿಲ್ಲು ರಾಮ್ ಎಂಬ ಈತ ಬಳಿಕ ಸ್ವಯಂ ಘೋಷಿತ ದೇವ ಮಾನವನಾಗಿ ಘೋಷಿಸಿಕೊಂಡಿದ್ದ. ಈತನ ಆಶ್ರಮಕ್ಕೆ ಬಂದಿದ್ದ ಸುಮಾರು 120ಕ್ಕೂ ಹೆಚ್ಚು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅದನ್ನು ವಿಡಿಯೋ ಸಿಡಿ ಮಹಿಳೆಯನ್ನು ಬ್ಲಾಕ್ ಮೇಲ್ ಮಾಡಿ ಬೆದರಿಸಿ ಮತ್ತೆ ಅವರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಚಹಾದಲ್ಲಿ ಮತ್ತು ಬರುವ ಔಷಧಿ ನೀಡಿ ಮಹಿಳೆಯರನ್ನುಈತ ಅತ್ಯಾಚಾರ ಮಾಡುತ್ತಿದ್ದ, ಈತನ ಕೆಲ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿತ್ತು. ಆತನ ಆಶ್ರಮದಲ್ಲಿ ಪೊಲೀಸರು ಅಶ್ಲೀಲ ಸೀಡಿಗಳನ್ನು ಕೂಡ ಪತ್ತೆ ಮಾಡಿದ್ದರು. 2018ರಲ್ಲಿ ಜಿಲೇಬಿ ಬಾಬಾನ ವೀಡಿಯೋಗಳು ವೈರಲ್ ಆಗಿದ್ದವಂತೆ. ಮಹಿಳೆಯರೊಂದಿಗಿನ ಬಾಬಾ ಅಶ್ಲೀಲ ನಡವಳಿಕೆ ನೋಡಿದ್ದ ಜನ ಬಾಬಾ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಿ ಪ್ರಕರಣ ದಾಖಲಿಸಿದ್ದರು.

ಇದಾದ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು, 2020ರಲ್ಲಿ ಆತನ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿತ್ತು. ಇದಾದ ನಂತರ ಫತೇಹಾಬಾದ್ ನ್ಯಾಯಾಲಯ ಈತನಿಗೆ 35 ಸಾವಿರ ರೂಪಾಯಿ ದಂಡ, 14 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ