ದೇಶ

ನೀವು 75 ವರ್ಷಕ್ಕೆ ನಿವೃತ್ತರಾಗುತ್ತೀರಾ ಮೋದಿಯವರೇ?: ಪ್ರಧಾನಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಶ್ನೆ

ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಗೆ ನಿವೃತ್ತಿಗೆ 75 ವರ್ಷ ಎಂದು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೂ ಈ ನಿಯಮ ಅನ್ವಯವಾಗುತ್ತದೆಯೇ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಶ್ನೆ ಮಾಡಿದ್ದಾರೆ.

ಹೈದರಾಬಾದ್: ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಗೆ ನಿವೃತ್ತಿಗೆ 75 ವರ್ಷ ಎಂದು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೂ ಈ ನಿಯಮ ಅನ್ವಯವಾಗುತ್ತದೆಯೇ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಶ್ನೆ ಮಾಡಿದ್ದಾರೆ.

ಚುನಾಯಿತ ಪ್ರತಿನಿಧಿಗೆ ಬಿಜೆಪಿಯಲ್ಲಿ ನಿವೃತ್ತಿಗೆ 75 ವರ್ಷ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದರಿಂದಾಗಿ ಅವರು ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಷಿ ಹಾಗೂ ಹಿರಿಯ ನಾಯಕರ ವಿರುದ್ಧ ಬಲವಂತವಾಗಿ ನಿರ್ಣಯ ಕೈಗೊಂಡಿದ್ದಾರೆ. ಇದೀಗ ನರೇಂದ್ರ ಮೋದಿ 74 ವರ್ಷ ದಾಟಿದೆ, ಇನ್ನೂ ಒಂದು ವರ್ಷ ಉಳಿದಿದೆ, ನಾನು ಅದೇ ಪ್ರಶ್ನೆಯನ್ನು ನರೇಂದ್ರ ಮೋದಿಯವರಿಗೆ ಕೇಳಲು ಬಯಸುತ್ತೇನೆ, ನೀವು 75 ನೇ ವಯಸ್ಸಿನಲ್ಲಿ ನಿವೃತ್ತರಾಗಲು ಸಿದ್ಧರಿದ್ದೀರಾ ಎಂದು ಕೇಳಿದ್ದಾರೆ.

ಸಿಎಂ ರೇವಂತ್ ರೆಡ್ಡಿ ಕೂಡ ಪ್ರಧಾನಿ ಮೋದಿಯವರ ಆರ್ಥಿಕ ನೀತಿಗಳ ಬಗ್ಗೆ ಪ್ರಶ್ನಿಸಿದ್ದಾರೆ. ಇನ್ನೂ ಒಂದು ವಿಷಯವನ್ನು ನೆನಪಿಸಬಯಸುತ್ತೇನೆ, 1947ರಿಂದ 2014ರವರೆಗೆ 14 ಪ್ರಧಾನಿಗಳು ಸುಮಾರು 67 ವರ್ಷಗಳ ಕಾಲ 55 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಪ್ರಧಾನಿ ಮೋದಿ 10 ವರ್ಷಗಳಲ್ಲಿ 113 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ದೇಶ ಸಂಕಷ್ಟ ಎದುರಿಸುತ್ತಿದೆ. ಮೋದಿಯವರು ಯಾವುದೇ ದಾಖಲೆಗಳನ್ನು ನೀಡಿದರೂ ನಾವು ನಂಬುವ ಸ್ಥಿತಿಯಲ್ಲಿಲ್ಲ. ಚುನಾವಣೆಯನ್ನು ಗೆಲ್ಲಲು ಅವರು ಯಾವುದೇ ಮಟ್ಟಕ್ಕೆ ಇಳಿಯಲು ಸಾಧ್ಯ. ಅವರಿಗೆ ಆ ವಿಶ್ವಾಸಾರ್ಹತೆಯೇ ಇಲ್ಲ ಎಂದು ಟೀಕಿಸಿದರು.

ತೆಲಂಗಾಣ ಪ್ರಚಾರ ವೇಳೆ ಸಿಎಂ ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ರಾಜ್ಯದ ಜನರು ಡಬಲ್ ಆರ್ ತೆರಿಗೆಯ ಹೊರೆ ಹೊರಬೇಕಾಗಿದೆ ಎಂದು ಟೀಕಿಸಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಡಬಲ್ ಆರ್ ಟ್ಯಾಕ್ಸ್ ಬಗ್ಗೆ ಚರ್ಚೆಯಾಗುತ್ತಿದೆ. ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ತೆಲಂಗಾಣದ ಎಲ್ಲಾ 17 ಸ್ಥಾನಗಳಿಗೆ ಮೇ 13 ರಂದು ಮತದಾನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT