ಮೋದಿ-ಅಮಿತ್ ಶಾ 
ದೇಶ

ಮೋದಿ 75ನೇ ವರ್ಷಕ್ಕೆ ನಿವೃತ್ತಿ ಆಗಲ್ಲ, ಪ್ರಧಾನಿಯಾಗಿ ಮುಂದುವರೆಯುತ್ತಾರೆ: ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ. ಅವರೇ ಮತ್ತೆ ಪ್ರಧಾನಿಯಾಗಿ ದೇಶ ಮುನ್ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ. ಅವರೇ ಮತ್ತೆ ಪ್ರಧಾನಿಯಾಗಿ ದೇಶ ಮುನ್ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ, ಇದೇ ವರ್ಷ ಸೆಪ್ಟೆಂಬರ್ ನಲ್ಲಿ ಪ್ರಧಾನಿ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಅವರ ಪಕ್ಷದ ನಿಯಮದ ಪ್ರಕಾರ 75 ವರ್ಷ ತುಂಬಿದವರು ನಿವೃತ್ತಿಯಾಗಬೇಕು ಅವರೇ 2014 ರಲ್ಲಿ ನಿಯಮ ಮಾಡಿದರು. ಹೀಗಾಗಿ ಮೋದಿ ಪ್ರಧಾನಿಯಾಗಿ ಮುಂದುವರೆಯಲು ಸಾಧ್ಯವಿಲ್ಲ. ಮೋದಿ ಬದಲು ಅಮಿತ್ ಶಾ ಪ್ರಧಾನಿಯಾಗುತ್ತಾರೆ. ಅಮಿತ್ ಶಾ ಪರವಾಗಿ ಮೋದಿ ಮತಯಾಚಿಸುತ್ತಿದ್ದಾರೆ ಎಂದು ಹೇಳಿದ್ದರು.

ಇಂದು ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, "ಅರವಿಂದ್ ಕೇಜ್ರಿವಾಲ್ ಮತ್ತು ಕಂಪನಿ ಹಾಗೂ ಇಂಡಿಯಾ ಬ್ಲಾಕ್‌ಗೆ ನಾನು ಹೇಳಲು ಬಯಸುತ್ತೇನೆ, ಅಂತಹ ಯಾವುದೇ (75 ವರ್ಷಗಳ ಮಿತಿ ನಿಯಮ) ಬಿಜೆಪಿಯ ಸಂವಿಧಾನದಲ್ಲಿ ಇಲ್ಲ. ಮೋದಿ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆ ಮತ್ತು ಮುಂದಿನ ಬಾರಿಯೂ ಅವರೇ ಪ್ರಧಾನಿಯಾಗಿ ಮುಂದುವರೆಯುತ್ತಾರೆ. ಈ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

ಸುಪ್ರೀಂ ಕೋರ್ಟ್ ನ ಮಧ್ಯಂತರ ಜಾಮೀನು ಕ್ಲೀನ್ ಚಿಟ್ ಎಂದು ಕೇಜ್ರಿವಾಲ್ ಭಾವಿಸಿದರೆ, ಅವರಿಗೆ ಕಾನೂನಿನ ಬಗ್ಗೆ ತಿಳುವಳಿಕೆ ಇಲ್ಲ ಎಂದರ್ಥ. ಅಬಕಾರಿ ನೀತಿ ಪ್ರಕರಣದಲ್ಲಿ ಅವರು ಆರೋಪಗಳಿಂದ ಮುಕ್ತರಾಗಿಲ್ಲ ಎಂದು ಅಮಿತ್ ಶಾ ತಿರುಗೇಟು ನೀಡಿದ್ದಾರೆ.

''ಚುನಾವಣಾ ಪ್ರಚಾರ ನಡೆಸಲು ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಅವರು ತಮ್ಮ ಬಂಧನ ತಪ್ಪೆಂದು ಸುಪ್ರೀಂ ಕೋರ್ಟ್ ಮುಂದೆ ಪ್ರಾರ್ಥಿಸಿದರು, ಆದರೆ ಸುಪ್ರೀಂ ಕೋರ್ಟ್ ಅದಕ್ಕೆ ಒಪ್ಪಲಿಲ್ಲ. ಅವರಿಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ ಮತ್ತು ಜೂನ್ 2 ರಂದು ಅವರು ತನಿಖಾ ಸಂಸ್ಥೆಯ ಮುಂದೆ ಶರಣಾಗಬೇಕು" ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT