ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ದೆಹಲಿ, ಪಂಜಾಬ್‌ನಲ್ಲಿ ಸರ್ಕಾರ ಉರುಳಿಸುವುದು ನನ್ನ ಬಂಧನದ ಹಿಂದಿನ ಉದ್ದೇಶವಾಗಿತ್ತು: ಅರವಿಂದ ಕೇಜ್ರಿವಾಲ್

ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಗಳನ್ನು ಉರುಳಿಸುವುದು ನನ್ನ ಬಂಧನದ ಹಿಂದಿನ ಬಿಜೆಪಿಯ ಉದ್ದೇಶವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.

ನವದೆಹಲಿ: ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಗಳನ್ನು ಉರುಳಿಸುವುದು ನನ್ನ ಬಂಧನದ ಹಿಂದಿನ ಬಿಜೆಪಿಯ ಉದ್ದೇಶವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.

ಭಾನುವಾರ ದೆಹಲಿಯಲ್ಲಿ ತಮ್ಮ ಪಕ್ಷದ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷವನ್ನು ಒಡೆಯುವ ಬಿಜೆಪಿಯ ಯೋಜನೆ ವಿಫಲವಾಗಿದೆ ಮತ್ತು ತಮ್ಮ ಬಂಧನದ ನಂತರ ಎಎಪಿ ಮತ್ತಷ್ಟು ಒಗ್ಗೂಡಿದೆ. ನನ್ನ ಬಂಧನಕ್ಕೂ ಮುನ್ನ ಬಿಜೆಪಿಯವರು ಪಕ್ಷವನ್ನು ಒಡೆಯುತ್ತೇವೆ ಮತ್ತು ದೆಹಲಿ ಮತ್ತು ಪಂಜಾಬ್‌ನಲ್ಲಿ ಸರ್ಕಾರವನ್ನು ಉರುಳಿಸುತ್ತೇವೆ ಎಂದು ಹೇಳುತ್ತಿದ್ದರು ಎಂದರು.

'ಅವರು ನನ್ನನ್ನು ಬಂಧಿಸಿ, ಪಕ್ಷವನ್ನು ಒಡೆಯುತ್ತೇವೆ ಮತ್ತು ದೆಹಲಿಯಲ್ಲಿ ಮತ್ತು ನಂತರ ಪಂಜಾಬ್‌ನಲ್ಲಿ ಸರ್ಕಾರವನ್ನು ಉರುಳಿಸುವುದಾಗಿ ಯೋಜಿಸಿದ್ದರು. ನನ್ನ ಬಂಧನದ ನಂತರ, ಅವರ ಯೋಜನೆ ವಿಫಲವಾಗಿದೆ. ನೀವು ಸಾಧ್ಯವಿರುವ ಎಲ್ಲವನ್ನೂ ಮಾಡಿದಿರಿ, ಆದರೆ ನೀವಂದುಕೊಂಡದ್ದು ಆಗಲಿಲ್ಲ' ಎಂದು ಕೇಜ್ರಿವಾಲ್ ಹೇಳಿದರು.

ದೇಶದ ರಾಜಕೀಯ ನಿರೂಪಣೆಯು ತಮ್ಮ ಪಕ್ಷಕ್ಕೆ ವಿರುದ್ಧವಾಗಿದೆ. ಆದರೆ, ನಮ್ಮ ಪಕ್ಷದ ಸದಸ್ಯರು ಒಗ್ಗಟ್ಟಿನಿಂದ ನಿಂತಿದ್ದರಿಂದ ಅದನ್ನು ದುರ್ಬಲಗೊಳಿಸಲು ಅವರಿಗೆ ಸಾಧ್ಯವಾಗಲಿಲ್ಲ. ತಾವು ಜೂನ್ 2ರಂದು ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ತಾವು ಮತ್ತೆ ಜೈಲಿಗೆ ಹೋದ ನಂತರ ಅವರೆಲ್ಲರೂ ಪಕ್ಷವನ್ನು ನೋಡಿಕೊಳ್ಳಬೇಕು' ಎಂದು ದೆಹಲಿ ಸಿಎಂ ತಮ್ಮ ಶಾಸಕರಿಗೆ ಹೇಳಿದರು.

ಈಗ ರದ್ದಾಗಿರುವ 2021–2022ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ (ಇ.ಡಿ) ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಇದೀಗ ಶುಕ್ರವಾರ ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ, ಎಎಪಿ ಮುಖ್ಯಸ್ಥರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಅವರು 'ಒಂದು ರಾಷ್ಟ್ರ, ಒಂದು ನಾಯಕ' ಮಿಷನ್‌ನಲ್ಲಿ ಎಲ್ಲ ವಿರೋಧ ಪಕ್ಷದ ನಾಯಕರನ್ನು ಕಂಬಿ ಹಿಂದೆ ಹಾಕುವ ಮೂಲಕ ಮತ್ತು ರಾಜಕೀಯವಾಗಿ ಮುಗಿಸುವ ಮೂಲಕ ಸರ್ವಾಧಿಕಾರವನ್ನು ಹೇರಲು ಹೊರಟಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT