ಬದರಿನಾಥ ದೇವಾಲಯ online desk
ದೇಶ

ಇಂದಿನಿಂದ ಬದರಿನಾಥ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತ

ಉತ್ತರಾಖಂಡ್ ನ ಗರ್ವಾಲ್ ಹಿಮಾಲಯದಲ್ಲಿರುವ ಬದರಿನಾಥ ದೇವಾಲಯ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.

ಉತ್ತರಾಖಂಡ್: ಉತ್ತರಾಖಂಡ್ ನ ಗರ್ವಾಲ್ ಹಿಮಾಲಯದಲ್ಲಿರುವ ಬದರಿನಾಥ ದೇವಾಲಯ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಚಳಿಗಾಲದ ಋತುವಿನಲ್ಲಿ ಬಂದ್ ಆಗಿದ್ದ ದೇವಾಲಯ ಈಗ ಮತ್ತೆ ಬಾಗಿಲು ತೆರೆದಿದೆ.

ಬದರಿ ಕ್ಷೇತ್ರಕ್ಕೆ ಭಕ್ತರ ಪ್ರವೇಶ ಮುಕ್ತವಾದ ಬಳಿಕ, ಬದರಿನಾಥ್, ಕೇದಾರನಾಥ್, ಯಮುನೋತ್ರಿ ಹಾಗೂ ಗಂಗೋತ್ರಿ ಪ್ರದೇಶಗಳಿಗೆ ಚಾರ್ ಧಾಮ್ ಯಾತ್ರೆ ಆರಂಭವಾಗಿದೆ. ವೇದ ಮಂತ್ರಗಳೊಂದಿಗೆ ಪೂಜೆ ಸಲ್ಲಿಸಿ ದೇವಾಲಯದ ಬಾಗಿಲು ತೆಗೆಯಲಾಗಿದೆ. ಹೂವುಗಳಿಂದ ಅಲಂಕೃತಗೊಂಡಿದ್ದ ದೇವಾಲಯದ ಆವರಣದಲ್ಲಿ ಮಳೆಯ ನಡುವೆಯೂ ಭಕ್ತರು ಸಮಾರಂಭವನ್ನು ವೀಕ್ಷಿಸಲು ಜಮಾಯಿಸಿದ್ದರು. ಮುಂಜಾನೆ 4 ಗಂಟೆಗೆ ಬಾಗಿಲು ತೆರೆಯುವ ಪ್ರಕ್ರಿಯೆ ಆರಂಭವಾಯಿತು.

ಈ ಸಂದರ್ಭದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜನತೆಗೆ ಶುಭಾಶಯ ಕೋರಿದರು.

ಶುಕ್ರವಾರ ಅಕ್ಷಯ ತೃತೀಯ ಸಂದರ್ಭದಲ್ಲಿ ಕೇದಾರನಾಥ, ಯಮ್ಯುನೋತ್ರಿ ಮತ್ತು ಗಂಗೋತ್ರಿ ದೇವಾಲಯಗಳ ಬಾಗಿಲು ಭಕ್ತರಿಗೆ ತೆರೆಯಲಾಗಿದೆ.

ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಶನಿವಾರ ಸಂಜೆ 4 ಗಂಟೆಯವರೆಗೆ, 7,37,885 ಜನರು ಬದರಿನಾಥ ದರ್ಶನಕ್ಕಾಗಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ 18,39,591 ಮಂದಿ ದೇಗುಲಕ್ಕೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT