ಶಶಿ ತರೂರ್ 
ದೇಶ

ಸೆ. 2025 ರವರೆಗೆ ಕಾಯುವ ಅಗತ್ಯವಿಲ್ಲ, ಜೂನ್‌ನಲ್ಲಿ ಚುನಾವಣಾ ಫಲಿತಾಂಶ ನಂತರ ಮೋದಿ ಪ್ರಧಾನಿಯಾಗಲ್ಲ: ತರೂರ್

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಜೂನ್ 4 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಚುಕ್ಕಾಣಿ ಹಿಡಿಯುವುದಿಲ್ಲವಾದ್ದರಿಂದ ದೇಶ ಸೆಪ್ಟೆಂಬರ್ 2025 ರವರೆಗೆ ಕಾಯಬೇಕಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಮುಂಬೈ: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಜೂನ್ 4 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಚುಕ್ಕಾಣಿ ಹಿಡಿಯುವುದಿಲ್ಲವಾದ್ದರಿಂದ ದೇಶ ಸೆಪ್ಟೆಂಬರ್ 2025 ರವರೆಗೆ ಕಾಯಬೇಕಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

2025 ರ ಸೆಪ್ಟೆಂಬರ್‌ನಲ್ಲಿ 75 ನೇ ವರ್ಷಕ್ಕೆ ಕಾಲಿಡುತ್ತಿರುವ ಮೋದಿ "ನಿವೃತ್ತಿ" ನಂತರ ಗೃಹ ಸಚಿವ ಅಮಿತ್ ಅವರನ್ನು ಪ್ರಧಾನಿ ಮಾಡಲಿದ್ದಾರೆ ಎಂಬ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ ತರೂರ್ ಈ ರೀತಿಯ ಹೇಳಿಕೆ ನೀಡಿದ್ದಾರೆ. "ಜೂನ್‌ನಲ್ಲಿ ಕೇಂದ್ರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ. ಸೆಪ್ಟೆಂಬರ್ 2025 ರವರೆಗೆ ಕಾಯುವ ಅಗತ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿಕೆಗೆ ತರೂರ್ ಪ್ರತಿಕ್ರಿಯಿಸಿದ್ದಾರೆ.

ವಾಣಿಜ್ಯ ನಗರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರೂರ್, ಪ್ರಧಾನಿ ಮೋದಿ ಸಾರ್ವಜನಿಕ ಭಾಷಣದ ಗುಣಮಟ್ಟವನ್ನು ಕಡಿಮೆ ಮಾಡಿದ್ದಾರೆ ಮತ್ತು ಅವರು ಬಳಸುತ್ತಿರುವ ಭಾಷೆ ದೇಶಕ್ಕೆ ಒಳ್ಳೆಯದಲ್ಲ ಎಂದು ಆರೋಪಿಸಿದರು.

ಈ ವರ್ಷದ ಆರಂಭದಲ್ಲಿ ಅಯೋಧ್ಯೆಯಲ್ಲಿ ಭಗವಾನ್ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ನಿರ್ಧಾರವನ್ನು ಸಮರ್ಥಿಸಿಕೊಂಡ ಅವರು, ರಾಮನ ಮೇಲೆ ಬಿಜೆಪಿ ಹಕ್ಕುಸ್ವಾಮ್ಯ ಹೊಂದಿಲ್ಲ ಎಂದು ಹೇಳಿದರು.

"ನಾನು ದೇವಸ್ಥಾನಗಳಿಗೆ ಹೋಗುವುದು ಪ್ರಾರ್ಥನೆಗಾಗಿಯೇ ಹೊರತು ರಾಜಕೀಯ ಮಾಡುವುದಕ್ಕಾಗಿ ಅಲ್ಲ. ಅವರು ಅಯೋಧ್ಯೆಯಲ್ಲಿ ನಡೆದ 'ಪ್ರಾಣ ಪ್ರತಿಷ್ಠಾ' ಸಮಾರಂಭವನ್ನು ರಾಜಕೀಯಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ. ನಾನು ರಾಮನನ್ನು ಬಿಜೆಪಿಗೆ ಒಪ್ಪಿಸಬೇಕೇ?" ಎಂದು ಪ್ರಶ್ನಿಸಿದ ತರೂರ್, ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ, ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ವಿಫಲತೆ ಮತ್ತು ಶೇ. 80 ರಷ್ಟು ಜನರ ಆದಾಯ ಕುಸಿತದಂತಹ ವಿಷಯಗಳ ಬಗ್ಗೆ ಮಹತ್ವದ ಸಂವಾದ ನಡೆಸಲು ಬಿಜೆಪಿ ವಿಫಲವಾಗಿದೆ ಎಂದು ಕಿಡಿಕಾರಿದರು.

ಮೋದಿಯ ನಿವೃತ್ತಿ ವಯಸ್ಸು" ಕುರಿತು ಕೇಜ್ರಿವಾಲ್ ಟೀಕೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ತರೂರ್, 'ಬಿಜೆಪಿ ಒಬ್ಬ ವ್ಯಕ್ತಿಗೆ ವಿನಾಯಿತಿ ನೀಡುತ್ತದೆಯೇ? ಎಂದು ಪ್ರಶ್ನಿಸಿದರು. ಏನೇ ಆಗಲಿ ನಾವು ಸೆಪ್ಟೆಂಬರ್ 2025 ರವರೆಗೆ ಕಾಯಬೇಕಾಗಿಲ್ಲ.

ಜೂನ್ 2024 ರ ನಂತರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT