ಶಶಿ ತರೂರ್ 
ದೇಶ

ಸೆ. 2025 ರವರೆಗೆ ಕಾಯುವ ಅಗತ್ಯವಿಲ್ಲ, ಜೂನ್‌ನಲ್ಲಿ ಚುನಾವಣಾ ಫಲಿತಾಂಶ ನಂತರ ಮೋದಿ ಪ್ರಧಾನಿಯಾಗಲ್ಲ: ತರೂರ್

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಜೂನ್ 4 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಚುಕ್ಕಾಣಿ ಹಿಡಿಯುವುದಿಲ್ಲವಾದ್ದರಿಂದ ದೇಶ ಸೆಪ್ಟೆಂಬರ್ 2025 ರವರೆಗೆ ಕಾಯಬೇಕಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಮುಂಬೈ: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಜೂನ್ 4 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಚುಕ್ಕಾಣಿ ಹಿಡಿಯುವುದಿಲ್ಲವಾದ್ದರಿಂದ ದೇಶ ಸೆಪ್ಟೆಂಬರ್ 2025 ರವರೆಗೆ ಕಾಯಬೇಕಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

2025 ರ ಸೆಪ್ಟೆಂಬರ್‌ನಲ್ಲಿ 75 ನೇ ವರ್ಷಕ್ಕೆ ಕಾಲಿಡುತ್ತಿರುವ ಮೋದಿ "ನಿವೃತ್ತಿ" ನಂತರ ಗೃಹ ಸಚಿವ ಅಮಿತ್ ಅವರನ್ನು ಪ್ರಧಾನಿ ಮಾಡಲಿದ್ದಾರೆ ಎಂಬ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ ತರೂರ್ ಈ ರೀತಿಯ ಹೇಳಿಕೆ ನೀಡಿದ್ದಾರೆ. "ಜೂನ್‌ನಲ್ಲಿ ಕೇಂದ್ರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ. ಸೆಪ್ಟೆಂಬರ್ 2025 ರವರೆಗೆ ಕಾಯುವ ಅಗತ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿಕೆಗೆ ತರೂರ್ ಪ್ರತಿಕ್ರಿಯಿಸಿದ್ದಾರೆ.

ವಾಣಿಜ್ಯ ನಗರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರೂರ್, ಪ್ರಧಾನಿ ಮೋದಿ ಸಾರ್ವಜನಿಕ ಭಾಷಣದ ಗುಣಮಟ್ಟವನ್ನು ಕಡಿಮೆ ಮಾಡಿದ್ದಾರೆ ಮತ್ತು ಅವರು ಬಳಸುತ್ತಿರುವ ಭಾಷೆ ದೇಶಕ್ಕೆ ಒಳ್ಳೆಯದಲ್ಲ ಎಂದು ಆರೋಪಿಸಿದರು.

ಈ ವರ್ಷದ ಆರಂಭದಲ್ಲಿ ಅಯೋಧ್ಯೆಯಲ್ಲಿ ಭಗವಾನ್ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ನಿರ್ಧಾರವನ್ನು ಸಮರ್ಥಿಸಿಕೊಂಡ ಅವರು, ರಾಮನ ಮೇಲೆ ಬಿಜೆಪಿ ಹಕ್ಕುಸ್ವಾಮ್ಯ ಹೊಂದಿಲ್ಲ ಎಂದು ಹೇಳಿದರು.

"ನಾನು ದೇವಸ್ಥಾನಗಳಿಗೆ ಹೋಗುವುದು ಪ್ರಾರ್ಥನೆಗಾಗಿಯೇ ಹೊರತು ರಾಜಕೀಯ ಮಾಡುವುದಕ್ಕಾಗಿ ಅಲ್ಲ. ಅವರು ಅಯೋಧ್ಯೆಯಲ್ಲಿ ನಡೆದ 'ಪ್ರಾಣ ಪ್ರತಿಷ್ಠಾ' ಸಮಾರಂಭವನ್ನು ರಾಜಕೀಯಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ. ನಾನು ರಾಮನನ್ನು ಬಿಜೆಪಿಗೆ ಒಪ್ಪಿಸಬೇಕೇ?" ಎಂದು ಪ್ರಶ್ನಿಸಿದ ತರೂರ್, ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ, ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ವಿಫಲತೆ ಮತ್ತು ಶೇ. 80 ರಷ್ಟು ಜನರ ಆದಾಯ ಕುಸಿತದಂತಹ ವಿಷಯಗಳ ಬಗ್ಗೆ ಮಹತ್ವದ ಸಂವಾದ ನಡೆಸಲು ಬಿಜೆಪಿ ವಿಫಲವಾಗಿದೆ ಎಂದು ಕಿಡಿಕಾರಿದರು.

ಮೋದಿಯ ನಿವೃತ್ತಿ ವಯಸ್ಸು" ಕುರಿತು ಕೇಜ್ರಿವಾಲ್ ಟೀಕೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ತರೂರ್, 'ಬಿಜೆಪಿ ಒಬ್ಬ ವ್ಯಕ್ತಿಗೆ ವಿನಾಯಿತಿ ನೀಡುತ್ತದೆಯೇ? ಎಂದು ಪ್ರಶ್ನಿಸಿದರು. ಏನೇ ಆಗಲಿ ನಾವು ಸೆಪ್ಟೆಂಬರ್ 2025 ರವರೆಗೆ ಕಾಯಬೇಕಾಗಿಲ್ಲ.

ಜೂನ್ 2024 ರ ನಂತರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT