ಕಂಗನಾ ರನೌತ್ 
ದೇಶ

ಭಾರತ ಹಿಂದೂ ರಾಷ್ಟ್ರವಾಗಬೇಕು: ಕಂಗನಾ ರನೌತ್

2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್.

ಮಂಡಿ: 2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ಅವರು, ಭಾರತ 'ಹಿಂದೂ ರಾಷ್ಟ್ರ'ವಾಗಬೇಕು ಎಂದು ಸೋಮವಾರ ಹೇಳಿದ್ದಾರೆ.

ಇಂದು ಕುಲುವಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕಂಗನಾ, ‘1947 ರಲ್ಲಿ ಪಾಕಿಸ್ತಾನವನ್ನು ಧರ್ಮದ ಆಧಾರದ ಮೇಲೆ ರಚಿಸಲಾಯಿತು. ಹಾಗಾದರೆ ಆ ಸಮಯದಲ್ಲಿ ಭಾರತವನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಲಿಲ್ಲ’ ಎಂದು ಪ್ರಶ್ನಿಸಿದರು. ಅಲ್ಲದೆ ಭಾರತ ಹಿಂದೂ ರಾಷ್ಟ್ರವಾಗಬೇಕು. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ" ಎಂದಿದ್ದಾರೆ.

1947 ರ ನಂತರ ಏನು ಅನುಸರಿಸಿದರು. ದೇಶವು ಬ್ರಿಟಿಷರ ಆಳ್ವಿಕೆಯಿಂದ ಮುಕ್ತವಾದ ನಂತರ ಹಲವಾರು ದಶಕಗಳ ಕಾಲ ಕಾಂಗ್ರೆಸ್‌ನ ದುರಾಡಳಿತವನ್ನು ನೋಡಿದೆ. ನಮ್ಮ ಪೂರ್ವಜರು ಮೊಘಲರ ಗುಲಾಮಗಿರಿ, ನಂತರ ಬ್ರಿಟಿಷರ ಗುಲಾಮಗಿರಿ ಮತ್ತು ನಂತರ ಕಾಂಗ್ರೆಸ್‌ನ ದುರಾಡಳಿತವನ್ನು ನೋಡಿದ್ದಾರೆ. ಆದರೆ ನಮಗೆ ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ ಎಂದು ಕಂಗನಾ ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ಅವರ ಎದುರು ಕಂಗನಾ ಕಣಕ್ಕಿಳಿದಿದ್ದಾರೆ. ಮಂಡಿ ಕ್ಷೇತ್ರಕ್ಕೆ ಜೂನ್ 1ರಂದು ಮತದಾನ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT