ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢ: ಭದ್ರತಾ ಪಡೆಗಳ ಮುಂದೆ ಶರಣಾದ 30 ನಕ್ಸಲೀಯರು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 30 ನಕ್ಸಲೀಯರು ಮಂಗಳವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಅವರಲ್ಲಿ 9 ಮಂದಿಗಳ ತಲೆ ರೂ. 39 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 30 ನಕ್ಸಲೀಯರು ಮಂಗಳವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಅವರಲ್ಲಿ 9 ಮಂದಿಗಳ ತಲೆ ರೂ. 39 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರು ಮಂದಿ ಮಹಿಳೆಯರು ಒಳಗೊಂಡ ನಕ್ಸಲೀಯರು, ಪೊಲೀಸ್ ಮತ್ತು ಸಿಆರ್ ಪಿಎಫ್ ನ ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದು, ಆದಿವಾಸಿಗಳ ಮೇಲೆ ಮಾವೋವಾದಿಗಳು ನಡೆಸಿದ ದೌರ್ಜನ್ಯ ಮತ್ತು ಟೊಳ್ಳಾದ ಮಾವೋವಾದಿ ಸಿದ್ಧಾಂತದಿಂದ ನಿರಾಶೆಗೊಂಡಿದ್ದೇವೆ ಎಂದು ಅವರು ಹೇಳಿರುವುದಾಗಿ ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಶರಣಾದ ನಕ್ಸಲೀಯರು ಪೊಲೀಸರ ಪುನರ್ವಸತಿ ನೀತಿಯಿಂದ ಪ್ರಭಾವಿತರಾಗಿದ್ದರು. ಶರಣಾದ 30 ಕಾರ್ಯಕರ್ತರಲ್ಲಿ ಇಬ್ಬರ ತಲೆಗೆ ತಲಾ 8 ಲಕ್ಷ ರೂ..ಮೂವರ ತಲೆಗೆ ತಲಾ 5, ಮತ್ತೆ ಇನ್ನೂ ಮೂವರ ತಲೆಗೆ ತಲಾ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಒಂಬತ್ತು ಕೇಡರ್‌ಗಳು ಭದ್ರತಾ ಸಿಬ್ಬಂದಿಯ ಮೇಲೆ ಅನೇಕ ದಾಳಿಗಳಲ್ಲಿ ಭಾಗಿಯಾಗಿದ್ದಾರೆ. ಶರಣಾದ ನಕ್ಸಲೀಯರಿಗೆ ತಲಾ 25,000 ರೂಪಾಯಿ ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಪುನರ್ವಸತಿ ಕಲ್ಪಿಸಲಾಗುವುದು, ಜಿಲ್ಲೆಯಲ್ಲಿ ಈ ವರ್ಷ 76 ನಕ್ಸಲೀಯರು ಹಿಂಸಾಚಾರವನ್ನು ತೊರೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT