ಚಟ್ಟದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ 
ದೇಶ

ಉತ್ತರ ಪ್ರದೇಶ: ನಾಮಪತ್ರ ಸಲ್ಲಿಸಲು 'ಚಟ್ಟ'ದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ!

ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ‘ಆರ್ತಿ ಬಾಬಾ’ ಎಂದೇ ಹೆಸರಾಗಿರುವ ಯಾದವ್,ಎಂಬಿಎ ಮಾಡಿದ್ದರೂ ಈಗ ಬೌದ್ಧ ಸನ್ಯಾಸಿಯಾಗಿದ್ದು, ಭಿಕ್ಷೆಯಿಂದ ಜೀವನ ನಡೆಸುತ್ತಿರುವುದಾಗಿ ಹೇಳುತ್ತಾರೆ.

ಲಖನೌ: ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ‘ಆರ್ತಿ ಬಾಬಾ’ ಎಂದೇ ಹೆಸರಾಗಿರುವ ಯಾದವ್,ಎಂಬಿಎ ಮಾಡಿದ್ದರೂ ಈಗ ಬೌದ್ಧ ಸನ್ಯಾಸಿಯಾಗಿದ್ದು, ಭಿಕ್ಷೆಯಿಂದ ಜೀವನ ನಡೆಸುತ್ತಿರುವುದಾಗಿ ಹೇಳುತ್ತಾರೆ.

ಈ ಹಿಂದೆಯೂ ಅವರು ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ತಮ್ಮ ಚುನಾವಣಾ ಕಚೇರಿಯನ್ನು ಸ್ಮಶಾನದ ಮೈದಾನದಲ್ಲಿ ತೆರೆದಿರುವುದಾಗಿ ಹೇಳುವ ಯಾದವ್, ಹೊಸ ಮೋಟಾರು ವಾಹನ ಕಾಯ್ದೆಯಡಿ ವಾಹನ ದಂಡದಂತಹ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳನ್ನು ತೆಗೆದುಹಾಕಬೇಕೆಂದು ಬಯಸುತ್ತಾರೆ.

"ನಿರುದ್ಯೋಗಿ ಕಾರ್ಮಿಕರು ಇಷ್ಟು ದೊಡ್ಡ ಮೊತ್ತದ ದಂಡ ಪಾವತಿಸಲು ಹಣ ಎಲ್ಲಿಂದ ತರುತ್ತಾರೆ ಎಂದು ಪ್ರಶ್ನಿಸುವ ಯಾದವ್, "ಮೊಬೈಲ್ ಫೋನ್‌ಗಳಲ್ಲಿ ಸ್ಥಗಿತಗೊಂಡಿರುವ ಜೀವಮಾನದ ಒಳಬರುವ ಕರೆಗಳ ಸೌಲಭ್ಯವನ್ನು ಮರುಪ್ರಾರಂಭಿಸಬೇಕು" ಎಂದರು. ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ತನ್ನ ಜೀವನವನ್ನು ಮುಡಿಪಾಗಿಡಲು ಬಯಸಿದ್ದರಿಂದ ಅವಿವಾಹಿತನಾಗಿ ಉಳಿಯಲು ನಿರ್ಧರಿಸಿರುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT